ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pendrive Movie: ಟೀಸರ್‌ನಲ್ಲೇ ಕುತೂಹಲ ಮೂಡಿಸಿದ ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ʼಪೆನ್‌ಡ್ರೈವ್ʼ ಚಿತ್ರ

Pendrive Movie: ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ʼಬಿಗ್ ಬಾಸ್ʼ ಖ್ಯಾತಿಯ ತನಿಷಾ ಕುಪ್ಪಂಡ, ಕಿಶನ್ ಹಾಗೂ ಕನಸಿನ ರಾಣಿ ಮಾಲಾಶ್ರೀ ಮುಖ್ಯಪಾತ್ರದಲ್ಲಿ ಅಭಿನಯಿಸಿರುವ ʼಪೆನ್‌ಡ್ರೈವ್ʼ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು ಟೀಸರ್ ಬಿಡುಗಡೆ ಮಾಡಿದರು.

ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ʼಪೆನ್‌ಡ್ರೈವ್ʼ ಚಿತ್ರದ ಟೀಸರ್‌ ರಿಲೀಸ್‌

Profile Siddalinga Swamy May 3, 2025 5:35 PM

ಬೆಂಗಳೂರು: ಆರ್.ಎಚ್. ಎಂಟರ್‌ಪ್ರೈಸಸ್ ಮತ್ತು ಶ್ರೀ ತಿರುಮಲ ಸಿನಿ ಎಂಟರ್‌ಟೈನ್ಮೆಂಟ್ ಅರ್ಪಿಸುವ, ಎನ್. ಹನುಮಂತರಾಜು ಹಾಗೂ ಲಯನ್ ಎಸ್. ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ʼಬಿಗ್ ಬಾಸ್ʼ ಖ್ಯಾತಿಯ ತನಿಷಾ ಕುಪ್ಪಂಡ, ಕಿಶನ್ ಹಾಗೂ ಕನಸಿನ ರಾಣಿ ಮಾಲಾಶ್ರೀ ಮುಖ್ಯಪಾತ್ರದಲ್ಲಿ ಅಭಿನಯಿಸಿರುವ ʼಪೆನ್‌ಡ್ರೈವ್ʼ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.



ʼಪೆನ್‌ಡ್ರೈವ್ʼ ಕಾಲ್ಪನಿಕ ಕಥಾಹಂದರ ಹೊಂದಿರುವ ಚಿತ್ರ‌. ನಿರ್ಮಾಪಕರ ಸಹಕಾರದಿಂದ ಅಂದುಕೊಂಡ ಯೋಜನೆಯಂತೆ ಒಂದೇ ಹಂತದಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ಬಿಡುಗಡೆ ಮಾಡುವ ಸಿದ್ದತೆ ನಡೆಯುತ್ತಿದೆ. ನಾಗೇಶ್ ಅವರ ಸಹ ನಿರ್ದೇಶನ, ಪಿ.ವಿ.ಆರ್. ಸ್ವಾಮಿ ಛಾಯಾಗ್ರಹಣ, ಡಾ.ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ಹಾಗೂ ಸಂಗೀತ ನಿರ್ದೇಶನ ಈ ಚಿತ್ರಕ್ಕಿದ್ದು, ಮಾಲಾಶ್ರೀ, ತನಿಷಾ ಕುಪ್ಪಂಡ, ಕಿಶನ್,‌ ಸಂಜನಾ ನಾಯ್ಡು, ಕರಿಸುಬ್ಬು ಮುಂತಾದವರು ತಾರಾಬಳಗದಲ್ಲಿದ್ದಾರೆ. ಇಂದು ಟೀಸರ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಟ್ರೇಲರ್ ಅನಾವರಣವಾಗಲಿದೆ ಎಂದು ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ತಿಳಿಸಿದರು.

ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರ ಮಾಡಿದ್ದೇನೆ. ಒಂದು ಹಾಡಿನಲ್ಲೂ ಅಭಿನಯಿಸಿದ್ದೇನೆ. ನಿರ್ದೇಶಕರು ಒಳ್ಳೆಯ ಕಥೆ ಮಾಡಿದ್ದಾರೆ ಎಂದರು ನಟಿ ತನಿಷಾ ಕುಪ್ಪಂಡ.

ʼಬಿಗ್ ಬಾಸ್ʼ ನಂತರ ನಾನು ಧಾರಾವಾಹಿಯಲ್ಲಿ ನಟಿಸಿದ್ದೆ. ನನ್ನ ಅಭಿನಯದ ಮೊದಲ ಚಿತ್ರ ʼಪೆನ್‌ಡ್ರೈವ್ʼ ಎಂದು ನಟ ಕಿಶನ್ ಹೇಳಿದರು. ನಟಿ ಸಂಜನ ನಾಯ್ಡು ಮತ್ತು ನಟ ಕರಿಸುಬ್ಬು ಅವರು ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು.

ಈ ಸುದ್ದಿಯನ್ನೂ ಓದಿ | Chitrasanthe Award: ಮೇ 18ರಂದು ʼಚಿತ್ರಸಂತೆʼ ಪ್ರಶಸ್ತಿ ಪ್ರದಾನ ಸಮಾರಂಭ

ಟೀಸರ್‌ ಬಿಡುಗಡೆ ಮಾಡಿಕೊಟ್ಟ ಸಾ.ರಾ. ಗೋವಿಂದು ಅವರಿಗೆ ಧನ್ಯವಾದ ತಿಳಿಸಿ ಮಾತನಾಡಿದ ನಿರ್ಮಾಪಕರಾದ ಹನುಮಂತ ರಾಜು ಹಾಗೂ ಲಯನ್ ಎಸ್. ವೆಂಕಟೇಶ್, ತಮ್ಮ ಚಿತ್ರಕ್ಕೆ ಎಲ್ಲರೂ ಪ್ರೋತ್ಸಾಹ ನೀಡಿ. ಚಿತ್ರಮಂದಿರಗಳಿಗೆ ಬಂದು ಚಿತ್ರ ನೋಡಿ ಎಂದರು. ಕಾರ್ಯಕಾರಿ ನಿರ್ಮಾಪಕ ಜಿ.ವೆಂಕಟೇಶ್ ಸಹ ಚಿತ್ರದ ಕುರಿತು ಮಾತನಾಡಿದರು.

ವಾಣಿಜ್ಯ ಮಂಡಳಿ ಕಾರ್ಯದರ್ಶಿ ಪ್ರವೀಣ್ ಕುಮಾರ್, ಜೆ. ವೆಂಕಟೇಶ್ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.