ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Marutha Movie: ಪೊಲೀಸ್ ಅಧಿಕಾರಿಗಳಿಂದ ಬಹುನಿರೀಕ್ಷಿತ ʼಮಾರುತʼ ಚಿತ್ರ ವೀಕ್ಷಣೆ

Sandalwood News: ಡಾ.ಎಸ್. ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು - ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ಬಹುನಿರೀಕ್ಷಿತ ಚಿತ್ರ ʼಮಾರುತʼ ಚಿತ್ರವನ್ನು ಪೊಲೀಸ್‌ ಅಧಿಕಾರಿಗಳು ವೀಕ್ಷಿಸಿದ್ದಾರೆ. ಈ ಕುರಿತ ಡಿಟೇಲ್ಸ್‌ ಇಲ್ಲಿದೆ.

ʼಮಾರುತʼ ಚಿತ್ರ ಬಿಡುಗಡೆಗೂ ಚಿತ್ರತಂಡ ವಿಶೇಷ ಪ್ರದರ್ಶನ ಆಯೋಜನೆ

ಬೆಂಗಳೂರು, ನ. 18: ಖ್ಯಾತ ನಿರ್ದೇಶಕ ಡಾ.ಎಸ್.ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು - ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ಬಹುನಿರೀಕ್ಷಿತ ಚಿತ್ರ ʼಮಾರುತʼ ಚಿತ್ರ (Marutha Movie) ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಇದೇ ನವೆಂಬರ್ 21ರಂದು ಬಹುನಿರೀಕ್ಷಿತ ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರ ಬಿಡುಗಡೆಗೂ ಪೂರ್ವದಲ್ಲಿ ಪೊಲೀಸ್ ಇಲಾಖೆಯವರಿಗಾಗಿ ಚಿತ್ರತಂಡ ವಿಶೇಷ ಪ್ರದರ್ಶನ ಆಯೋಜಿಸಿತ್ತು. ಬೆಂಗಳೂರು ನಗರ (ಭದ್ರತೆ) ಉಪ ಪೊಲೀಸ್ ಆಯುಕ್ತ ಮಂಜುನಾಥ ಬಾಬು, ನಾರಾಯಣ ಸ್ವಾಮಿ ಅವರು ಹಾಗೂ ಅನೇಕ ಪೊಲೀಸ್ ಸಿಬ್ಬಂದಿ ಈ ಚಿತ್ರವನ್ನು ವೀಕ್ಷಿಸಿದರು.

ಚಿತ್ರ ವೀಕ್ಷಣೆ ನಂತರ ಮಾತನಾಡಿದ ಉಪ ಪೊಲೀಸ್ ಆಯುಕ್ತ ಮಂಜುನಾಥ್ ಬಾಬು, ಮೊದಲು ಸಮಾಜಕ್ಕೆ ಇಂತಹ ಉತ್ತಮ ಚಿತ್ರವನ್ನು ನಿರ್ಮಾಣ ಮಾಡಿಕೊಟ್ಟ ನಿರ್ಮಾಪಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಿರ್ದೇಶಕ ಎಸ್. ನಾರಾಯಣ್ ಅವರು ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ವಿಷಯವನ್ನಿಟ್ಟುಕೊಂಡು ಅದ್ಭುತವಾದ ಸಿನಿಮಾ ಮಾಡಿದ್ದಾರೆ. ಚಿತ್ರದಲ್ಲಿ ನಟಿಸಿರುವ ಎಲ್ಲಾ ಕಲಾವಿದರು ಚೆನ್ನಾಗಿ ಅಭಿನಯಿಸಿದ್ದಾರೆ. ದುನಿಯಾ ವಿಜಯ್ ಅವರದಂತೂ ಅದ್ಭುತ ಅಭಿನಯ. ಸಾಮಾಜಿಕ ಜಾಲತಾಣಗಳಿಂದ ಎಷ್ಟು ಅನುಕೂಲ ಇದೆಯೊ, ಅಷ್ಟೇ ತೊಂದರೆ ಕೂಡ ಇದೆ. ಅನ್ನುವುದನ್ನು ಸಿನಿಮಾದಲ್ಲಿ ತೋರಿಸಿದ್ದಾರೆ. ಇದು ಹಿರಿಯರು, ಕಿರಿಯರು ಎಂಬ ಭೇದಭಾವವಿಲ್ಲದೆ ಎಲ್ಲಾ ವಯಸ್ಸಿನವರು ಅವಶ್ಯವಾಗಿ ನೋಡುವ ಸಿನಿಮಾ. ಅದರಲ್ಲೂ ಹೆಣ್ಣುಮಕ್ಕಳಿಗೆ ಎಚ್ಚರಿಕೆಯ ಗಂಟೆ. ಈಗಿನ ಯುವಪೀಳಿಗೆ ಈ ಚಿತ್ರ ನೋಡಿ ತಿಳಿದುಕೊಳ್ಳುವುದು ಬಹಳಷ್ಟಿದೆ. ಎಲ್ಲರೂ ತಪ್ಪದೆ ಕುಟುಂಬ ಸಮೇತ ಈ ಚಿತ್ರ ನೋಡಿ ಎಂದರು.

Marutha Movie 1

ಮತ್ತೋರ್ವ ಪೊಲೀಸ್ ಅಧಿಕಾರಿ ನಾರಾಯಣಸ್ವಾಮಿ ಮಾತನಾಡಿ, ಎಂತಹುದೊ ಚಿತ್ರಗಳು ಬರುತ್ತಿರುವ ಈ ಕಾಲದಲ್ಲಿ ಸಾಮಾಜಿಕ ಕಳಕಳಿಯಿಟ್ಟುಕೊಂಡು ಒಂದು ಉತ್ತಮ ಚಿತ್ರವನ್ನು ಮಾಡಿರುವ ನಿರ್ದೇಶಕರಿಗೆ, ಚಿತ್ರಕ್ಕೆ ಬಂಡಾವಳ ಹೂಡಿರುವ ನಿರ್ಮಾಪಕರಿಗೆ, ಉತ್ತಮವಾಗಿ ಅಭಿನಯಿಸಿರುವ ಕಲಾವಿದರಿಗೆ ಅಭಿನಂದನೆ ತಿಳಿಸುತ್ತೇನೆ. ಎಲ್ಲರೂ ಈ ಚಿತ್ರವನ್ನು ನೋಡಿ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | Marutha Movie: ಅದ್ಧೂರಿಯಾಗಿ ನೆರವೇರಿತು ʼಮಾರುತʼ ಚಿತ್ರದ ಪ್ರೀ ರಿಲೀಸ್ ಇವೆಂಟ್; ನ.21ಕ್ಕೆ ಸಿನಿಮಾ ರಿಲೀಸ್‌

ನಿರ್ದೇಶಕ ಎಸ್. ನಾರಾಯಣ್ ಹಾಗೂ ನಿರ್ಮಾಪಕರಾದ ಕೆ. ಮಂಜು ಮತ್ತು ರಮೇಶ್ ಯಾದವ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.