ಬೆಂಗಳೂರು, ನ.7: ಇನ್ನೇನು ಬಿಡುಗಡೆಗೆ ಸಿದ್ಧವಾಗಿರುವ, ಸುಧೀರ್ ಅತ್ತಾವರ್ ನಿರ್ದೇಶನದ ʼಕೊರಗಜ್ಜʼ ಸಿನಿಮಾ (Koragajja Movie) ಹುಟ್ಟಿಸುತ್ತಿರುವ ಕ್ರೇಜ್ ಅಷ್ಟಿಷ್ಟಲ್ಲ. ಚಿತ್ರದ ಧನಾತ್ಮಕ ಜನಪ್ರಿಯತೆಯ ಬಗ್ಗೆ ರಾಜ್ಯದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಹರ್ಷ ವ್ಯಕ್ತಪಡಿಸಿ, ನಶಿಸಿ ಹೋಗುತ್ತಿರುವ ನಮ್ಮ ಪುರಾತನ ಸಂಸ್ಕ್ರತಿ ಹಾಗೂ ಕಲೆಯನ್ನು ʼಕೊರಗಜ್ಜʼ ರೀತಿಯ ಸಿನಿಮಾಗಳು ಎತ್ತಿಹಿಡಿಯುತ್ತಿರುವುದು ಸಂತೋಷ ನೀಡುತ್ತಿದೆ. ಈ ರೀತಿಯ ಚಿತ್ರಗಳು ಹೆಚ್ಚು ಹೆಚ್ಚು ಮೂಡಿಬರಲಿ ಎಂದು ಆಶಿಸಿ, ತ್ರಿವಿಕ್ರಮ ಸಿನಿಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ಅಡಿ ತಯಾರಾಗಿರುವ ʼಕೊರಗಜ್ಜʼ ಚಿತ್ರಕ್ಕೆ ಶುಭ ಹಾರೈಸಿದರು.
ಇದೇ ತಿಂಗಳ 11ರಂದು ಮಂಗಳೂರಿನಲ್ಲಿ ನಡೆಯಲಿರುವ ಅಖಿಲಭಾರತ ಮಟ್ಟದ ʼಕೊರಗಜ್ಜʼ ಚಿತ್ರದ ಪತ್ರಿಕಾಗೋಷ್ಠಿ ಹಾಗೂ ಅಂದೇ ಸಂಜೆ ರಾಷ್ಟ್ರದ ವಿವಿಧ ಭಾಗಗಳಿಂದ ಆಗಮಿಸಲಿರುವ ಪತ್ರಕರ್ತರ ಮತ್ತು ಸಾವಿರಾರು ಜನರ ಹಾಗೂ ಸಿನಿಮಾ ತಾರೆಯರ ಸಮ್ಮುಖದಲ್ಲಿ ನಡೆಯಲಿರುವ ಕೊರಗಜ್ಜ ದೈವದ ಅದ್ದೂರಿ ಕೋಲಸೇವೆಯ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರೊಂದಿಗೆ ಚಿತ್ರತಂಡ ಚರ್ಚಿಸಿತು. ಕೆಲ ಸ್ಥಳಿಯ ಕಿಡಿಕೇಡಿಗಳು ನೀಡುತ್ತಿರುವ ಬೆದರಿಕೆ ಮತ್ತು ಚಿತ್ರೀಕರಣದ ವೇಳೆ ನಡೆದ ದಾಳಿಗಳ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರೊಂದಿಗೆ ನಿರ್ದೇಶಕ ಸುಧೀರ್ ಅತ್ತಾವರ್, ಚಿತ್ರದ ಪ್ರಮುಖ ನಟಿ ಭವ್ಯ, ನಿರ್ಮಾಪಕ ತ್ರಿವಿಕ್ರಮ್, ಕಾರ್ಯಕಾರಿ ನಿರ್ಮಾಪಕ ವಿದ್ಯಾಧರ್ ಶೆಟ್ಟಿ ಚರ್ಚಿಸಿ ವಿಶೇಷ ಭದ್ರತೆಯ ಬಗ್ಗೆ ಮನವಿ ಮಾಡಿಕೊಂಡರು. ಗೃಹ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿ, ಮಂಗಳೂರಿನ ಪೊಲೀಸ್ ಕಮಿಷನರ್ ಜತೆ ವಿಷಯ ಪ್ರಸ್ತಾಪಿಸಿದರು ಎಂದು ಅವರು ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಅತ್ಯಂತ ವಿಭಿನ್ನ ರೀತಿಯಲ್ಲಿ ಚಿತ್ರದ ಫಸ್ಟ್ ಲುಕ್ ಮತ್ತು 3ಡಿ ಮೋಷನ್ ಪೋಸ್ಟರ್ ಬಿಡುಗಡೆ ಗೊಳಿಸಿ ಚಿತ್ರದ ಮೇಲಿನ ನಿರೀಕ್ಷೆ ಇಮ್ಮಡಿಗೊಳಿಸಿದ್ದ ಚಿತ್ರತಂಡ, ದೇಶಾದ್ಯಂತ ಪತ್ರಕರ್ತರನ್ನು ಒಟ್ಟುಗೂಡಿಸಿ, ಚಿತ್ರದ ಟ್ರೇಲರ್ ಅಥವಾ ಆಡಿಯೋ ಲಾಂಚ್ ಮಾಡುವ ಪ್ಲಾನ್ ಮಾಡಬಹುದೇ ಎನ್ನುವ ಸಂದೇಹ ಜೋರಾಗಿ ಕೇಳಿಬರುತ್ತಿದೆ.
ಈ ಸುದ್ದಿಯನ್ನೂ ಓದಿ | Winter Fashion 2025: ಯುವಕ-ಯುವತಿಯರನ್ನು ಆವರಿಸಿಕೊಂಡ ಯೂನಿಸೆಕ್ಸ್ ಪಫರ್ ಜಾಕೆಟ್ಸ್
ʼಕೊರಗಜ್ಜʼ ಚಿತ್ರದ ಫಸ್ಟ್ ಲುಕ್ ಟೀಸರ್, 3ಡಿ ಮೋಷನ್ ಪೋಸ್ಟರ್ ಬಿಡುಗಡೆ
ಬೆಂಗಳೂರು: ಸುಧೀರ್ ಅತ್ತಾವರ್ ನಿರ್ದೇಶನದ ಹಾಗೂ ತ್ರಿವಿಕ್ರಮ ಸಪಲ್ಯ ನಿರ್ಮಾಣದ ಬಹು ನಿರೀಕ್ಷಿತ, ಸಕ್ಸಸ್ ಫಿಲಂಸ್ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ಅಡಿಯ ʼಕೊರಗಜ್ಜʼ ಚಿತ್ರದ (Koragajja Movie) ಫಸ್ಟ್ ಲುಕ್ ಟೀಸರ್ ಹಾಗೂ 3ಡಿ ಮೋಷನ್ ಪೋಸ್ಟರ್ ಇತ್ತೀಚೆಗೆ ಅದ್ಧೂರಿಯಾಗಿ ಬಿಡುಗಡೆಯಾಯಿತು. ದಕ್ಷಿಣ ಕನ್ನಡದ ವಾದ್ಯ ಹಿಮ್ಮೇಳ ಹಾಗೂ ಉಡುಪಿಯ ಮಹಿಳಾ ತಂಡದವರ ಹುಲಿ ನೃತ್ಯದ ಮೆರವಣಿಗೆಯಲ್ಲಿ ಸಾಗಿಬಂದ ʼಕೊರಗಜ್ಜʼ ನ ಎರಡು ಕಟೌಟ್ಗಳು ಡೊಳ್ಳು,ಕೊಂಬು-ಕಹಳೆ, ಕೊಳಲು, ತಾಸೆ, ತಾಳಗಳ ವಾದ್ಯಮೇಳದ ಹಿನ್ನೆಯಲ್ಲಿ ಹುಲಿವೇಶದ ಅಬ್ಬರದ ನ್ರತ್ಯದ ನಡುವೆ ಫಸ್ಟ್ ಲುಕ್ ಅನಾವರಣ ಗೊಂಡಿರುವುದು ಅತ್ಯಂತ ವಿಶೇಷವಾಗಿತ್ತು.
ಸಮಾರಂಭದಲ್ಲಿ ಉಪಸ್ಥಿತರಿದ್ದ ಮಾಜಿ ಸಚಿವೆ ಮೋಟಮ್ಮ, ನಿರ್ಮಾಪಕಿ - ನಿರ್ದೇಶಕಿ ವಿಜಯಲಕ್ಷ್ಮಿ ಸಿಂಗ್, ನಿರ್ದೇಶಕ, ನಿರ್ಮಾಪಕ, ಸಿನಿಮಾದ ನಟ ನಟಿಯರೆಲ್ಲ ಕಟೌಟ್ಗೆ ಪುಷ್ಪಾರ್ಚನೆ ಗೊಳಿಸಿದ್ದು ಕಾರ್ಯಕ್ರಮಕ್ಕೆ ವಿಶೇಷವಾದ ಮೆರುಗನ್ನು ನೀಡಿತು.
ಮೂರು ವರ್ಷಗಳ ಹಿಂದೆ ಆರಂಭವಾದ ಸಿನಿಮಾ ಈಗ ಅನೇಕ ಅಡೆತಡೆಗಳನ್ನು ದಾಟಿ ಬಿಡುಗಡೆಯ ಹಂತ ತಲುಪಿದೆ. ಇದರ ಪೂರ್ವಭಾವಿಯಾಗಿ ಇಂದು ಫಸ್ಟ್ ಲುಕ್ ಟೀಸರ್ ಹಾಗೂ ತ್ರಿಡಿ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ್ದೇವೆ. ನನಗೆ ತಿಳಿದ ಹಾಗೆ ದಕ್ಷಿಣ ಭಾರತದಲ್ಲೇ ಇದೇ ಮೊದಲ ಬಾರಿಗೆ ಈ ರೀತಿಯ ತ್ರಿಡಿ ಪೋಸ್ಟರ್ ಮಾಡಿರುವುದು. ಕೊರಗಜ್ಜನ ಆಶೀರ್ವಾದದಿಂದ ಸಿನಿಮಾ ಅಂದುಕೊಂಡ ಹಾಗೆ ಬಂದಿದೆ. ಚಿತ್ರವನ್ನು ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಪಕ ತ್ರಿವಿಕ್ರಮ ಸಪಲ್ಯ ಮತ್ತು ಕಾರ್ಯಕಾರಿ ನಿರ್ಮಾಪಕ ವಿದ್ಯಾಧರ್ ಶೆಟ್ಟಿ ತಮ್ಮ ಕಾರ್ಯ ನಿರ್ವಹಿಸಿರುತ್ತಾರೆ. ಚಿತ್ರತಂಡದ ಸಹಕಾರ ಅಪಾರ. ಒಟ್ಟು ಆರು ಭಾಷೆಗಳಲ್ಲಿ ಮೂಡಿಬಂದಿರುವ ನಮ್ಮ ಚಿತ್ರದಲ್ಲಿ ಒಟ್ಟು 31 ಹಾಡುಗಳಿವೆ. (ಆರು ಭಾಷೆಗಳಿಂದ). ಗೋಪಿ ಸುಂದರ್ ಅವರ ಸಂಗೀತ ಸಂಯೋಜನೆಯಲ್ಲಿ ಭಾರತದ ಪ್ರಸಿದ್ದ ಗಾಯಕ - ಗಾಯಕಿಯರು ಈ ಹಾಡನ್ನು ಹಾಡಿದ್ದಾರೆ. ಸುಮಾರು ಇಪ್ಪತ್ತನಾಲ್ಕು ವರ್ಷದ ತನಿಯ ದೈವತ್ವಕ್ಕೇರಿ ಕೊರಗಜ್ಜನಾದ ಕಥೆಯನ್ನು ಈ ಚಿತ್ರದಲ್ಲಿ ತೋರಿಸಲಾಗುತ್ತಿದೆ ಎಂದು ನಿರ್ದೇಶಕ ಸುಧೀರ್ ಅತ್ತಾವರ್ ತಿಳಿಸಿದರು.
ಇದು ನಾನು ಜೈ ಜಗದೀಶ್ ಆರಂಭಿಸಿದ ಸಿನಿಮಾ. ಸುಮಾರು 25 ಸಿನಿಮಾ ನಿರ್ಮಾಣ ಮಾಡಿರುವ ನಮಗೆ ಈ ಸಿನಿಮಾ ನಿರ್ಮಾಣ ಮಾಡಲು ಸಾಧ್ಯವಾಗದೆ, ಈ ಪ್ರೋಜೆಕ್ಟ್ನಿಂದ ಹಿಂದೆ ಸರಿದೆವು. ಆದರೆ ಈಗ ಅದು ಸುಧೀರ್ ಅತ್ತಾವರ್ಗೆ ಇದು ಒಲಿದಿದೆ. ವಿಭಿನ್ನವಾಗಿ- ಅದ್ದೂರಿ ಫಸ್ಟ್ ಲುಕ್ ರಿಲೀಸ್ ನೋಡಿ ಈ ಸಿನಿಮಾ ಯಾವ ಮಟ್ಟದಲ್ಲಿ ಮೂಡಿಬಂದಿರಬಹುದೆನ್ನುವುದನ್ನು ಊಹಿಸಬಹುದು ಎಂದು ವಿಜಯಲಕ್ಷ್ಮಿ ಸಿಂಗ್ ಅವರು ತಿಳಿಸಿದರು.
ನಿರ್ದೇಶಕರು ನನಗೆ ಬಹಳ ವರ್ಷಗಳ ಸ್ನೇಹಿತರು. ಅವರು ಹೇಳಿದ ಕಥೆ ಕೇಳಿದ ತಕ್ಷಣ ನಿರ್ಮಾಣಕ್ಕೆ ಮುಂದಾದೆ. ನಾವು ಸಹ ಕೊರಗಜ್ಜನನ್ನು ಆರಾಧಿಸುವ ಕುಟುಂಬದವರು. ಅನುಭವಿ ಕಲಾವಿದರು ಹಾಗೂ ನುರಿತ ತಂತ್ರಜ್ಞರು ನಮ್ಮ ಚಿತ್ರದಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ನವೆಂಬರ್ ಕೊನೆಗೆ ಚಿತ್ರವನ್ನು ತೆರೆಗೆ ತರುವ ಪ್ರಯತ್ನದಲ್ಲಿದ್ದೇವೆ ಎಂದರು ನಿರ್ಮಾಪಕ ತ್ರಿವಿಕ್ರಮ ಸಪಲ್ಯ.
ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ಮಾಪಕ ವಿದ್ಯಾಧರ್ ಶೆಟ್ಟಿ ಈ ಸಿನಿಮಾದ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಸತತ 3 ವರ್ಷಗಳಿಂದ ಸಿನಿಮಾದ ಚಿತ್ರೀಕರಣ ಮತ್ತು ಪೋಸ್ಟ್ ಪ್ರೊಡಕ್ಷನ್ ಕೆಲಸದ ಬಗೆಗಿನ ಸಾವಿಸ್ತಾರ ವಿಚಾರ ಹಂಚಿಕೊಂಡರು. ನಿರ್ದೇಶಕರ ಹಾಗೂ ಸಹ ಕಲಾವಿದರ ಕಾರ್ಯವೈಖರಿಯನ್ನು ಶ್ಲಾಘಿಸುತ್ತಾ, ಚಿತ್ರೀಕರಣದ ಅನುಭವಗಳನ್ನು ಹಂಚಿಕೊಂಡ ಹಿರಿಯ ನಟಿ ಭವ್ಯ ಅವರು, ರಾಣಿ ʼಪಂಜಂದಾಯಿʼ ಪಾತ್ರದಲ್ಲಿ ಖ್ಯಾತ ನಟ ಕಬೀರ್ ಬೇಡಿಯೊಂದಿಗೆ ನಟಿಸಿದ ಅನುಭವ ಹೇಳಿದರು. ಹಾಡಿನ ಬಿಟಿಎಸ್ ಮತ್ತು ಮೇಕಿಂಗ್ ವೀಡಿಯೋ ನೆರೆದವರನ್ನು ಮಂತ್ರಮುಗ್ಧ ಗೊಳಿಸಿತು.
ಈ ಸುದ್ದಿಯನ್ನೂ ಓದಿ | Winter Fashion 2025: ವಿಂಟರ್ ಪಾರ್ಟಿ ಪ್ರಿಯ ಯುವತಿಯರನ್ನು ಸವಾರಿ ಮಾಡುತ್ತಿರುವ ಸಿಕ್ವಿನ್ಸ್ ಡ್ರೆಸ್
ನನ್ನ ವೃತ್ತಿಜೀವನದಲ್ಲೇ ಇದು ವಿಭಿನ್ನವಾದ ಸಿನಿಮಾ ಎಂದು ಮಾತನಾಡಿದ ನಟಿ ಶೃತಿ, ನಾನು ಈ ಚಿತ್ರದಲ್ಲಿ ಕೊರಗಜ್ಜನ ಸಾಕು ತಾಯಿಯ ಪಾತ್ರ ನಿರ್ವಹಿಸಿದ್ದೇನೆ. ಈ ಚಿತ್ರಕ್ಕಾಗಿ ಸತತ ಇಪ್ಪತ್ತೆಂಟು ಗಂಟೆಗಳ ಚಿತ್ರೀಕರಣ ಮಾಡಿದ್ದೇನೆ. ಇದು ಮರೆಯಲಾರದ ಅನುಭವ. ಅಷ್ಟು ಹೊತ್ತು ಕೆಲಸ ಮಾಡಿದರೂ ನಿರ್ದೇಶಕರಲ್ಲಿದ್ದ ಉತ್ಸಾಹ ಒಂದು ಚೂರು ಕಡಿಮೆ ಆಗಿರಲಿಲ್ಲ. ಕೊರಗಜ್ಜನ ಆಶೀರ್ವಾದದಿಂದ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.