Elumale Movie: 'ಏಳುಮಲೆʼ ಟೈಟಲ್ ಟೀಸರ್ ರಿಲೀಸ್! ತರುಣ್ ಸುಧೀರ್ ಸಿನಿಮಾಗೆ ಶಿವಣ್ಣ-ಪ್ರೇಮ್ ಸಾಥ್
ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ ನಿರ್ದೇಶನದ ಚೊಚ್ಚಲ ಸಿನಿಮಾದ ಟೈಟಲ್ ಟೀಸರ್ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಏಳುಮಲೆ ಎಂಬ ಟೈಟಲ್ ಇಡಲಾಗಿದೆ. ರಕ್ಷಿತಾ ಸಹೋದರ ರಾಣಾ ಹಾಗೂ ಮಹಾನಟಿ ಖ್ಯಾತಿಯ ಪ್ರಿಯಾಂಕಾ ಜೋಡಿಯಾಗಿ ಅಭಿನಯಿ ಸುತ್ತಿದ್ದಾರೆ.


ಬೆಂಗಳೂರು: ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ ನಿರ್ದೇಶನದ ಚೊಚ್ಚಲ ಸಿನಿಮಾದ ಟೈಟಲ್ ಟೀಸರ್ ರಿಲೀಸ್ ಆಗಿದೆ. ಬೆಂಗಳೂರಿನ ಒರಿಯನ್ ಮಾಲ್ನಲ್ಲಿ ಟೈಟಲ್ ಲಾಂಚ್ ಕಾರ್ಯಕ್ರಮ ನಡೆಯಿತು. ಕರುನಾಡ ಚಕ್ರವರ್ತಿ ಶಿವಣ್ಣ ಟೈಟಲ್ ಟೀಸರ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಜೋಗಿ ಪ್ರೇಮ್ ಕೂಡ ಕಾರ್ಯಕ್ರಮಕ್ಕೆ ವಿಶೇಷ ಅಥಿಯಾಗಿ ಆಗಮಿಸಿ ಚಿತ್ರತಂಡಕ್ಕೆ ಬೆಸ್ಟ್ ವಿಷಸ್ ತಿಳಿಸಿದರು. ಸ್ಟಾರ್ ಡೈರೆಕ್ಟರ್ ತರುಣ್ ಸುಧೀರ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಏಳುಮಲೆ (Elumale) ಎಂಬ ಟೈಟಲ್ ಇಡಲಾಗಿದೆ. ರಕ್ಷಿತಾ ಸಹೋದರ ರಾಣಾ ಹಾಗೂ ಮಹಾನಟಿ ಖ್ಯಾತಿಯ ಪ್ರಿಯಾಂಕಾ ಜೋಡಿಯಾಗಿ ಅಭಿನಯಿ ಸುತ್ತಿದ್ದಾರೆ.
ಟೈಟಲ್ ಟೀಸರ್ ರಿಲೀಸ್ ಬಳಿಕ ಮಾತನಾಡಿದ ಶಿವಣ್ಣ ಟೈಟಲ್ ಟೀಸರ್ ತುಂಬಾ ಚೆನ್ನಾಗಿದೆ. ಒಳ್ಳೆಯವರಿಗೆ ಒಳ್ಳೆದಾಗುತ್ತದೆ ಎನ್ನುವುದಕ್ಕೆ ಟೈಟಲ್ ಟೀಸರ್ ಸಾಕ್ಷಿ. ರಾಣಾ ತುಂಬಾ ಹ್ಯಾಂಡ್ಸ ಮ್ ಇದ್ದಾನೆ. ನಟಿ ಪ್ರಿಯಾಂಕಾ ಕೂಡ ನಟನೆಯಲ್ಲಿ ನಿಸ್ಸಿಮರು. ಹೊಸಬರು ಸಿನಿಮಾ ಮಾಡಿ ಮಿಂಚಬೇಕು ಎಂದು ಶುಭ ಹಾರೈಸಿದರು. ಜೋಗಿ ಪ್ರೇಮ್ ಮಾತನಾಡಿ, ಜೋಗಿ ಸಿನಿಮಾ ಮಾಡು ವಾಗ ಅಪ್ಪಾಜಿ ಜೊತೆಯಲ್ಲಿ ಕಾಲ ಕಳೆದಿದ್ದೆ. ಇದೀಗ ನಮ್ಮ ಯಜಮಾನ್ರು ಶಿವಣ್ಣ ಲಾಂಚ್ ಮಾಡಿದ್ದಾರೆ. ನೂರಷ್ಟು ಸಿನಿಮಾ ಸಕ್ಸಸ್ ಆಗಲಿದೆ ಎಂದು ಶುಭ ಹಾರೈಸಿದರು.
ಚಿತ್ರದ ನಿರ್ಮಾಪಕ ತರುಣ್ ಸುಧೀರ್ ಮಾತನಾಡಿ, ಕರ್ನಾಟಕದ ಎಲ್ಲಾ ಭಾಗದಲ್ಲಿಯೂ ಏಳು ಮಲೆ ಊರು ಹಾಗೂ ಮಲೆಮಹದೇಶ್ವರ ದೇವಸ್ಥಾನ, ಅದರ ಐತಿಹಾಸ ಸಿನಿಮಾ ಮೂಲಕ ಹೇಳುವುದರಲ್ಲಿ ನಿಸ್ಸಾಮರು ಅಂದರೆ ಶಿವಣ್ಣ ಹಾಗೂ ಪ್ರೇಮ್ ಸರ್. ಶಿವಣ್ಣ ಅವರಿಂದ ಟೈಟಲ್ ಲಾಂಚ್ ಆಗುತ್ತಿರುವುದು ಬ್ಲೆಸ್ಸಿಂಗ್. ಚಿತ್ರರಂಗ ಅನ್ನೋದು ಗೋಲ್ಡ್ ಮೈನಿಂಗ್..ಕೆಲವೊಮ್ಮೆ ಬೇಗನೇ ಚಿನ್ನ ಸಿಗುತ್ತದೆ. ಮತ್ತೆ ಕೆಲವೊಮ್ಮೆ ಸಮಯ ಕಳೆದು ಚಿನ್ನ ಸಿಗುತ್ತದೆ. ಇವತ್ತು ಟೈಟಲ್ ಟೀಸರ್ ಲಾಂಚ್ ಮಾಡುತ್ತಿದ್ದೇವೆ.. ಟೈಟಲ್ ರಿಲೀಸ್ ಗೂ ಮೊದಲೇ ಸಿನಿಮಾ ಮಾರಾಟವಾಗಿದೆ ಎಂದರು.
ಇದನ್ನು ಓದಿ:Nidradevi Next Door Movie: ʼನಿದ್ರಾದೇವಿ Next Doorʼ ಚಿತ್ರದ ʼನೀ ನನ್ನʼ ಎಂಬ ರೊಮ್ಯಾಂಟಿಕ್ ಸಾಂಗ್ ಔಟ್
ನಿರ್ದೇಶಕ ಪುನೀತ್ ರಂಗಸ್ವಾಮಿ, ಇದು ಸಂಘರ್ಷದ ಕಥೆಯಲ್ಲ. ಇದೊಂದು ಪ್ರೇಮಕಥೆ.. ಸುಂದರ ಕಥೆಯನ್ನು ಸಿನಿಮಾದಲ್ಲಿ ತೋರಿಸಲಾಗಿದ್ದು ಹೆಚ್ಚು ಕುತೂಹಲಕಾರಿಯಾಗಿದೆ ಎಂದರು. ಚೌಕ ಮತ್ತು ಕಾಟೇರ ಚಿತ್ರಗಳ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಅವರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅಟ್ಲಾಂಟಾ ನಾಗೇಂದ್ರ ಅವರು ಚಿತ್ರಕ್ಕೆ ಸಹ-ನಿರ್ಮಾಪಕರಾಗಿದ್ದಾರೆ. ಈ ಚಿತ್ರವು ನೈಜ ಘಟನೆಯನ್ನು ಆಧರಿಸಿದೆ. ಚಾಮರಾಜನಗರ, ಸೇಲಂ, ಈರೋಡ್ ಸೇರಿದಂತೆ ಕರ್ನಾಟಕ-ತಮಿಳುನಾಡು ಗಡಿ ಭಾಗದ ಸ್ಥಳಗಳಲ್ಲಿ ಈಗಾಗಲೇ ಚಿತ್ರೀಕರಣ ನಡೆಸಲಾಗಿದೆ.
ಈ ಸಿನಿಮಾದಲ್ಲಿ ರಾಣಾ, ಪ್ರಿಯಾಂಕಾ ಆಚಾರ್ ಜೊತೆಗೆ ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ಇದ್ದಾರೆ. ಅದ್ವಿತ್ ಗುರುಮೂರ್ತಿ ಛಾಯಾಗ್ರಹಣ, ಕೆಎಂ ಪ್ರಕಾಶ್ ಸಂಕಲನ, ನಾಗಾರ್ಜುನ ಶರ್ಮಾ ಹಾಗೂ ಪುನೀತ್ ರಂಗಸ್ವಾಮಿ ಸಂಭಾಷಣೆ, ಡಿ ಇಮ್ಮನ್ ಸಂಗೀತ ಚಿತ್ರಕ್ಕಿದೆ. ಈ ಸಿನಿಮಾ ತಮಿಳು, ತೆಲುಗು, ಕನ್ನಡದಲ್ಲಿ ರಿಲೀಸ್ ಆಗುತ್ತಿದೆ.