Monday, 16th September 2024

ಬೇತುಲ್‌ನಲ್ಲಿ ಭೀಕರ ಅಪಘಾತ: 11 ಮಂದಿ ಸಾವು

ವದೆಹಲಿ: ಮಧ್ಯಪ್ರದೇಶದ ಬೇತುಲ್‌ನಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ11 ಮಂದಿ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಗಳಿಗೆ ಮತ್ತು ಗಾಯಾಳುವಿಗೆ ಪರಿಹಾರ ಘೋಷಿಸಿದ್ದಾರೆ. ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡ ವರಿಗೆ 50,000 ರೂಪಾಯಿಗಳ ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿ ದ್ದಾರೆ.

ʻಮಧ್ಯಪ್ರದೇಶದ ಬೆತುಲ್‌ನಲ್ಲಿ ನಡೆದ ಅಪಘಾತದಲ್ಲಿ ಸಂಭವಿಸಿದ ಪ್ರಾಣ ಹಾನಿಯಿಂದ ನೋವಾಗಿದೆ. ಮೃತರಿಗೆ ನನ್ನ ಸಂತಾಪ. ಗಾಯಾಳುಗಳು ಶೀಘ್ರವೇ ಗುಣಮುಖರಾಗಲಿ. ಮೃತರ ಕುಟುಂಬಕ್ಕೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ ರೂ 50,000 ನೀಡಲಾಗುವುದುʼ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.