Saturday, 27th July 2024

ಅನಿಲ ಸೋರಿಕೆ: ಮೂವರ ಸಾವು

ಕೋಲ್ಕತಾ: ಪಶ್ಚಿಮ ಬಂಗಾಳದ ದುರ್ಗಾಪುರ ಸ್ಟೀಲ್ ಪ್ಲಾಂಟ್‌ ನಲ್ಲಿ ಅನಿಲ ಸೋರಿಕೆಯಾಗಿ ಮೂವರು ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಹಲವಾರು ಕಾರ್ಮಿಕರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ.

ಮೃತ ಕಾರ್ಮಿಕರು ಉಕ್ಕಿನ ಕಾರ್ಖಾನೆಯ ನಿರ್ವಾತ ಆಮ್ಲಜನಕ ಘಟಕದೊಳಗೆ ಸಿಲುಕಿಕೊಂಡಿದ್ದರು. ಅವರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಯಿ ತಾದರೂ ಉಳಿಸಲು ಸಾಧ್ಯವಾಗಲಿಲ್ಲ. ಸ್ಥಾವರದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯ ಮುಂದು ವರಿದಿದೆ.

2017 ರಲ್ಲಿ, ದುರ್ಗಾಪುರ ಸ್ಟೀಲ್ ಪ್ಲಾಂಟ್‌ನ ಇಬ್ಬರು ಗುತ್ತಿಗೆ ಕಾರ್ಮಿಕರು, 2010ರಲ್ಲಿ ಸ್ಥಾವರದಲ್ಲಿ ಮೀಥೇನ್ ಸೋರಿಕೆಯಿಂದಾಗಿ 27 ಕಾರ್ಮಿಕರು ಅಸ್ವಸ್ಥರಾಗಿದ್ದರು.

error: Content is protected !!