Thursday, 19th September 2024

ಪ್ರಾರ್ಥನೆಗೆ ತೆರಳುತ್ತಿದ್ದ ವೇಳೆ ವ್ಯಾನ್‌ ಡಿಕ್ಕಿ, ನಾಲ್ಕು ಮಕ್ಕಳ ಸಾವು

ಕರ್ನೂಲ್: ಚರ್ಚ್ ಗೆ ಪ್ರಾರ್ಥನೆಗೆ ತೆರಳುತ್ತಿದ್ದ ಮಕ್ಕಳು ರಸ್ತೆ ದಾಟುವ ವೇಳೆ ವ್ಯಾನೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಕ್ಕಳು ಸಾವನ್ನಪ್ಪಿ, 15 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕರ್ನೂಲ್ – ಚಿತ್ತೂರು ಹೆದ್ದಾರಿಯಲ್ಲಿ  ನಡೆದಿದೆ.

ಜಿಲ್ಲೆಯ ಯೆರ್ರಾಕುಂಟ್ಲಾದ ಸ್ಥಳೀಯರು ಹಾಗು 30 ಮಕ್ಕಳು ಪ್ರಾರ್ಥನೆಗಾಗಿ ಬೆಳಗಿನ ಜಾವ 4.30ರ ಸುಮಾರಿಗೆ ಚರ್ಚೆಗೆ ತೆರಳು ತ್ತಿದ್ದರು. ಈ ವೇಳೆ ವ್ಯಾನ್ ವೊಂದು ವೇಗವಾಗಿ ಬಂದಿದ್ದು, ರಭಸದಿಂದ ಡಿಕ್ಕಿ ಹೊಡೆದಿದೆ. ಇದರಲ್ಲಿ ದಂಪತಿಗಳಿಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಬೆಳಗಿನ ಜಾವ ಮಂಜಿನ ವಾತಾವರಣವಿತ್ತು. ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ಮಕ್ಕಳಿಗೆ ಡಿಕ್ಕಿ ಹೊಡೆದ ಬಳಿಕವು ವ್ಯಾನ್ ಚಾಲಕ ವಾಹನವನ್ನು ನಿಲ್ಲಿಸದೇ ಮುಂದಕ್ಕೆ ಸಾಗಿದ್ದಾನೆ. ಈ ವೇಳೆ ಸ್ಥಳೀಯರು ವಾಹನವನ್ನು ಹಿಂಬಾಲಿಸಿ ಹೋಗಿ ಚಾಲಕನನ್ನು ಹಿಡಿದಿದ್ದರು. ಬಳಿಕ ಪೊಲೀಸರ ವಶಕ್ಕೆ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *