Thursday, 19th September 2024

ಉನ್ನಾವೋ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ಪರ ವಕೀಲ ನಿಧನ

ಲಖನೌ: ಉನ್ನಾವೋ ಅತ್ಯಾಚಾರ ಪ್ರಕರಣ(2017) ಕ್ಕೆ ಸಂಬಂಧಿಸಿದಂತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಸಂತ್ರಸ್ತೆ ಪರ ವಕೀಲ ಮಹೇಂದ್ರ ಸಿಂಗ್ ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

2019ರ ಜುಲೈನಲ್ಲಿ ಉತ್ತರ ಪ್ರದೇಶದ ರಾಯ್​​ಬರೇಲಿ ಬಳಿ ರೇಪ್​ ಸಂತ್ರಸ್ತೆ ಹಾಗೂ ಮಹೇಂದ್ರ ಸಿಂಗ್ ಇದ್ದ ಕಾರು ಅಪಘಾತ ಕ್ಕೀಡಾಗಿತ್ತು. ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಇದು ಪೂರ್ವನಿಯೋಜಿತ ಕೃತ್ಯ ಎಂಬುದು ಬಯಲಾಗಿತ್ತು.

ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡ ಸಂತ್ರಸ್ತೆ ಮತ್ತು ಸಿಂಗ್​ರನ್ನು ದೆಹಲಿಯ ಏಮ್ಸ್​ಗೆ ದಾಖಲಿಸಲಾಗಿತ್ತು. ಎರಡು ತಿಂಗಳ ಬಳಿಕ ಸಂತ್ರಸ್ತೆ ಡಿಸ್ಚಾರ್ಚ್​ ಆಗಿದ್ದಳು. ಸಿಂಗ್​ರನ್ನು ಸಂಪೂರ್ಣ ವಿಶ್ರಾಂತಿ ತೆಗೆದು ಕೊಳ್ಳುವಂತೆ ತಿಳಿಸಿ ಮನೆಗೆ ಕಳುಹಿಸಲಾಗಿತ್ತು.

 

Leave a Reply

Your email address will not be published. Required fields are marked *