Thursday, 19th September 2024

ಕೆ ಅಣ್ಣಾಮಲೈ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

ಚೆನ್ನೈ: ಮಿಳುನಾಡು ಸರಕಾರ ವಿರುದ್ಧದ ಡಿಎಂಕೆ ಫೈಲ್ಸ್ ವಿಚಾರಕ್ಕೆ ಸಂಬಂಧಿಸಿ ದಂತೆ ರಾಜ್ಯ ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ವಿರುದ್ಧ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸರಕಾರ ಬುಧವಾರ ಮಾನನಷ್ಟ ಮೊಕದ್ದಮೆ ದಾಖಲಿಸಿದೆ.

ಪಬ್ಲಿಕ್ ಪ್ರಾಸಿಕ್ಯೂಟರ್, ಅಣ್ಣಾಮಲೈ ಅವರು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಮಾನಹಾನಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

2011ರಲ್ಲಿ ಚೆನ್ನೈ ಮೆಟ್ರೋ ಒಪ್ಪಂದವನ್ನು ಸರಿಪಡಿಸಲು ಎಂಕೆ ಸ್ಟಾಲಿನ್‌ಗೆ ₹ 200 ಕೋಟಿ ನೀಡಲಾಗಿದೆ ಎಂದು ಬಿಜೆಪಿ ನಾಯಕ ಇತ್ತೀಚೆಗೆ ಆರೋಪಿಸಿದ್ದರು. ಸ್ಟಾಲಿನ್ ಅವರ ಪಕ್ಷವಾದ ಡಿಎಂಕೆ ನಾಯಕರು ₹ 1.34 ಲಕ್ಷ ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಅದು ಅವರು ಭ್ರಷ್ಟಾಚಾರದ ಮೂಲಕ ಗಳಿಸಿದ್ದಾರೆ . ಮುಖ್ಯಮಂತ್ರಿ ಅವರ ಕುಟುಂಬ ಸದಸ್ಯರು ರಾಜ್ಯದಲ್ಲಿ ಹೂಡಿಕೆ ಮಾಡುತ್ತಿರುವ ದುಬೈ ಕಂಪನಿಯ ನಿರ್ದೇಶಕರು ಎಂದು ಆರೋಪಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಡಿಎಂಕೆ ವಕ್ತಾರ ಟಿಕೆಎಸ್ ಇಳಂಗೋವನ್,ಅಣ್ಣಾಮಲೈ ಅವರನ್ನು ಶಿಕ್ಷಿಸುವುದೇ ಉತ್ತಮ ಕ್ರಮವಾಗಿದೆ. ರಾಹುಲ್ ಗಾಂಧಿ ಹೇಳಿದ್ದು ಏನೂ ಅಲ್ಲ, ಆದರೆ ಅವರನ್ನು ಅನರ್ಹಗೊಳಿಸ ಲಾಗಿದೆ. ಅವರು ಹಾಗೆ ಮಾಡಲು ಸಾಧ್ಯವಾದಾಗ, ಅಣ್ಣಾಮಲೈ ವಿರುದ್ಧ ಮೊಕದ್ದಮೆ ಹೂಡಲು ಕಾರಣವಿದೆ ಎಂದು ಹೇಳಿದ್ದಾರೆ.

ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ, ಈ ವರ್ಷ ಏಪ್ರಿಲ್ 14 ರಂದು ₹ 1.34 ಲಕ್ಷ ಕೋಟಿ ಮೌಲ್ಯದ ಆಸ್ತಿಯ ದೀರ್ಘ ಪಟ್ಟಿಯನ್ನು ಬಹಿರಂಗಪಡಿಸಿದ್ದರು. ಇದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಮತ್ತು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್, ದುರೈ ಮುರುಗನ್, ಇವಿ ವೇಲು, ಕೆ ಪೊನ್ಮುಡಿ, ವಿ ಸೆಂಥಿಲ್ ಬಾಲಾಜಿ, ಮತ್ತು ಮಾಜಿ ಕೇಂದ್ರ ಸಚಿವ ಎಸ್ ಜಗತ್ರಕ್ಷಕನ್ ಸೇರಿದಂತೆ ಹಲವರ ಒಡೆತನದಲ್ಲಿದೆ ಎಂದು ಆರೋಪಿಸಿದ್ದಾರೆ.