Friday, 20th September 2024

Arvind Kejriwal: ಕೇಜ್ರಿವಾಲ್‌ ಭವಿಷ್ಯ ಇಂದು ನಿರ್ಧಾರ- ಕೆಲವೇ ಗಂಟೆಗಳಲ್ಲಿ ಜಾಮೀನು ಅರ್ಜಿ ತೀರ್ಪು ಪ್ರಕಟ

Arvind Kejriwal

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ (Delhi Excise Policy Case) ತಿಹಾರ್ ಜೈಲು ಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal)‌ ಅವರ ಜಾಮೀನು ಅರ್ಜಿ ತೀರ್ಪು ಇಂದು ಪ್ರಕಟವಾಗಲಿದೆ. ಆ ಮೂಲಕ ದಿಲ್ಲಿ ಸಿಎಂ ಅವರಿಗೆ ಮತ್ತೆ ಜೈಲಾ ಅಥವಾ ಬೇಲಾ ಎಂಬುದು ಇಂದು ಸುಪ್ರೀಂಕೋರ್ಟ್‌ ತೀರ್ಪಿನಲ್ಲಿ ನಿರ್ಧಾರವಾಗಲಿದೆ.

ಸೆ.5ರಂದು ಕೇಜ್ರಿವಾಲ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸೂರ್ಯಕಾಂತ್‌ ಮತ್ತು ಉಜ್ಜಲ್‌ ಭುವನ್‌ ಇದ್ದ ನ್ಯಾಯಪೀಠ, ವಾದ ಪ್ರತಿವಾದಗಳನ್ನು ಅಲಿಸಿದ ಬಳಿಕ ಆದೇಶವನ್ನು ಕಾಯ್ದಿರಿಸಿತ್ತು. ಇಂದು ಈ ಅರ್ಜಿಯ ತೀರ್ಪನ್ನು ಪ್ರಟಿಸಲಿದೆ.

ಪ್ರಕರಣದಲ್ಲಿ ಜಾಮೀನು ಕೋರಿ ವಿಚಾರಣಾ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸುವ ಬದಲು ನೇರವಾಗಿ ಹೈಕೋರ್ಟ್‌ಗೆ ಕೇಜ್ರಿವಾಲ್‌ ಮೊರೆ ಹೋಗಿದ್ದರು. ಆದರೆ ಅವರ ಅರ್ಜಿ ತಿರಸ್ಕರಿಸಿದ ದಿಲ್ಲಿ ಹೈಕೋರ್ಟ್‌ ಸಿಬಿಐ ಬಂಧನ ಸರಿಯಾದ ಕ್ರಮ ಎಂದು ತೀರ್ಪು ನೀಡಿತ್ತು. ಇದೀಗ ಇದನ್ನು ಪ್ರಶ್ನಿಸಿ ಆಪ್‌ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಈ ಅರ್ಜಿ ತೀರ್ಪು ನಾಳೆ ಪ್ರಕಟವಾಗಲಿದೆ.

ಕೇಜ್ರಿವಾಲ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಕೇಜ್ರಿವಾಲ್, ವಿಚಾರಣಾ ನ್ಯಾಯಾಲಯವು ಬಂಧನದ ಸಮಯ ಸ್ವಲ್ಪ ಅಸಾಮಾನ್ಯವಾಗಿದೆ ಎಂದು ಉಲ್ಲೇಖಿಸಿದೆ. ಟ್ರಿಪಲ್ ಪರೀಕ್ಷೆಯನ್ನು ಸಂಪೂರ್ಣವಾಗಿ ಪೂರೈಸಲಾಗಿದೆ. ಕೇಜ್ರಿವಾಲ್‌ ಒಬ್ಬರನ್ನು ಹೊರತುಪೊಡಿಸಿ ಉಳಿದೆಲ್ಲಾ ಆರೋಪಿಗಳಾದ ಸಿಸೋಡಿಯಾ, ಕವಿತಾ, ಬುಚ್ಚಿ ಬಾಬುಗೆ ಜಾಮೀನು ಸಿಕ್ಕಿರುವುದು ವಿಪರ್ಯಾಸ ಎಂದಿದ್ದಾರೆ.

ಇದಕ್ಕೆ ತಿರುಗೇಟು ಕೊಟ್ಟ ಸಿಬಿಐ ಪರ ವಕೀಲ ಸಾಲಿಸಿಟರ್ ಜನರಲ್ ಎಸ್ ವಿ ರಾಜು, ಅರವಿಂದ್ ಕೇಜ್ರಿವಾಲ್ ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಪ್ರಮುಖ ರೂವಾರಿ. ಕೋವಿಡ್‌ ಸಂದರ್ಭದಲ್ಲಿ ಕೇಜ್ರಿವಾಲ್ ತರಾತುರಿಯಲ್ಲಿ ನೀತಿಯನ್ನು ಅನುಮೋದಿಸಿದ್ದರು ಎಂದು ವಾದಿಸಿದ್ದಾರೆ.

ಕೇಜ್ರಿವಾಲ್‌ ವಿರುದ್ಧ ಪ್ರಕರಣ ಏನು?

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದೆ

ಅಬಕಾರಿ ನೀತಿ ಹಗರಣದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ತಂಡವು ಮಾರ್ಚ್ 21ರ ರಾತ್ರಿ 9 ಗಂಟೆ ವೇಳೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಸಿಬಿಐ ಮತ್ತು ಇಡಿ ಪ್ರಕಾರ, ಅಬಕಾರಿ ನೀತಿಯನ್ನು ಬದಲಾಯಿಸಿದಾಗ ಅಕ್ರಮಗಳು ನಡೆದಿವೆ ಮತ್ತು ಪರವಾನಗಿ ಹೊಂದಿರುವವರಿಗೆ ಅನಗತ್ಯ ಅನುಕೂಲಗಳನ್ನು ವಿಸ್ತರಿಸಲಾಗಿದೆ. ಈ ಬಗ್ಗೆ ವಿಚಾರಣೆ ನಡೆಯುತ್ತಿದೆ.

ಈ ಸುದ್ದಿಯನ್ನೂ ಓದಿ: Arvind Kejriwal: ಕೇಜ್ರಿವಾಲ್‌ ನ್ಯಾಯಾಂಗ ಬಂಧನ ಸೆ.25ರವರೆಗೆ ವಿಸ್ತರಣೆ