Saturday, 7th September 2024

ಆಗಸ್ಟ್​ 8ರವರೆಗೆ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ವದೆಹಲಿಳ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ಆಗಸ್ಟ್​ 8ರವರೆಗೆ ವಿಸ್ತರಿಸಲಾಗಿದೆ. ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಅರವಿಂದ್ ಕೇಜ್ರಿವಾಲ್ ಮಾರ್ಚ್ 21 ರಿಂದ ಜೈಲಿನಲ್ಲಿದ್ದಾರೆ ಮತ್ತು ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿದೆ. ಮೇ 10 ರಂದು, ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಅವರಿಗೆ 21 ದಿನಗಳ ಮಧ್ಯಂತರ ಜಾಮೀನು ನೀಡಿತು. ಚುನಾವಣೆ ಮುಗಿದ ತಕ್ಷಣ ಜೂನ್ 2ರಂದು ಜೈಲಿಗೆ ಮರಳಿದ್ದರು.

ಮಾರ್ಚ್ 21 ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿತ್ತು. ಜು.1 ರಂದು ಇಡಿ ವಿನೋದ್ ಚೌಹಾಣ್ ಮತ್ತು ಆಶಿಶ್ ಮಾಥುರ್ ವಿರುದ್ಧ ಮತ್ತೊಂದು ಪೂರಕ ಪ್ರಾಸಿಕ್ಯೂಷನ್ ದೂರನ್ನು ದಾಖಲಿಸಿತ್ತು.ಕಳೆದ ವಿಚಾರಣೆಯಲ್ಲಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಜುಲೈ 25 ರವರೆಗೆ ವಿಸ್ತರಿಸಿದ್ದರು.

Leave a Reply

Your email address will not be published. Required fields are marked *

error: Content is protected !!