Friday, 18th October 2024

ನೀತಿ ಸಂಹಿತೆ ಉಲ್ಲಂಘನೆ: ಅಸ್ಸಾಂ ಸಿಎಂಗೆ ಆಯೋಗ ಎಚ್ಚರಿಕೆ

ನವದೆಹಲಿ: ಇದೇ 30ರಂದು ಅಸ್ಸಾಂನ ಒಂದು ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯ ಪ್ರಚಾರದ ವೇಳೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿಯ ತಾರಾ ಪ್ರಚಾರಕ ಶರ್ಮಾ ಅವರು ಮಾದರಿ ನೀತಿ ಸಂಹಿತೆಗೆ ಸಂಬಂಧಿಸಿದಂತೆ ತಾನು ನೀಡಿರುವ ಸಲಹೆ/ಸೂಚನೆ ಗಳಿಗೆ ವ್ಯತಿರಿಕ್ತವಾಗಿ ನಡೆದುಕೊಂಡಿದ್ದಾರೆ’ ಎಂದು ಆಯೋಗ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಇನ್ನು ಮುಂದೆ ಪ್ರಚಾರದ ವೇಳೆ ಸಾರ್ವಜನಿಕ ಹೇಳಿಕೆಗಳನ್ನು ನೀಡುವಾಗ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಕಟ್ಟು ನಿಟ್ಟಾಗಿ ಅನುಸರಿಸುವಂತೆ ಎಚ್ಚರಿಕೆ ನೀಡುವ ಜೊತೆಗೆ, ಜಾಗರೂಕರಾಗಿ ಮತ್ತು ಸಂಯಮದಿಂದ ವರ್ತಿಸಬೇಕು’ ಎಂದು ಆದೇಶದಲ್ಲಿ ತಿಳಿಸಿದೆ.

ಉಪ ಚುನಾವಣೆಯ ಪ್ರಚಾರದ ವೇಳೆ ಶರ್ಮಾ ಅವರು ರಸ್ತೆಗಳ ಅಭಿವೃದ್ಧಿ ಮತ್ತು ಇತರೆ ಅಭಿವೃದ್ಧಿ ಯೋಜನೆಗಳ ಅನು ಷ್ಠಾನದ ಭರವಸೆ ನೀಡುವ ಮೂಲಕ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿ ದ್ದರು.