Thursday, 19th September 2024

ಖಾಸಗೀಕರಣ ವಿರೋಧಿಸಿ ಎರಡು ದಿನ ಬ್ಯಾಂಕ್‌ ಮುಷ್ಕರ, ಆದರೆ…

ನವದೆಹಲಿ: ಖಾಸಗೀಕರಣ ವಿರೋಧಿಸಿ ಸಾರ್ವಜನಿಕ ವಲಯದ ಬ್ಯಾಂಕ್ ಗಳ ನೌಕರರು ಎರಡು ದಿನಗಳ ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕಾರಣಕ್ಕೆ ಮಾರ್ಚ್ ನಲ್ಲಿ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್ ವ್ಯವಹಾರ ನಡೆಯಲ್ಲ. ಮಾರ್ಚ್ 15ರಿಂದ ಎರಡು ದಿನಗಳ ಕಾಲ ಬ್ಯಾಂಕ್ ಮುಷ್ಕರ ನಡೆಯಲಿದೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಜೆಟ್ ನಲ್ಲಿ ಮತ್ತೆರಡು ಬ್ಯಾಂಕ್ ವಿಲೀನದ ಘೋಷಣೆ ಮಾಡಿದ್ದಾರೆ. ಇದನ್ನು ವಿರೋಧಿಸಿ ಬ್ಯಾಂಕ್ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಮಾರ್ಚ್ 15 ಮತ್ತು 16ರಂದು ಮುಷ್ಕರ ಹಾಗೂ ಅದಕ್ಕಿಂತ ಮೊದಲು 13 ಎರಡನೇ ಶನಿವಾರ, 14 ಭಾನುವಾರ ಕಾರಣ ಬ್ಯಾಂಕ್ ಮುಚ್ಚಿರಲಿದೆ.

ಒಂಬತ್ತು ಬ್ಯಾಂಕ್ ಒಕ್ಕೂಟಗಳ ಕೇಂದ್ರ ಸಂಘಟನೆಯಾದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಮುಷ್ಕರ ಘೋಷಿಸಿದೆ. ಯುನೈಟೆಡದ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಸಭೆ ನಡೆಸಿ ಮುಷ್ಕರದ ತೀರ್ಮಾನ ಕೈಗೊಂಡಿದೆ.

ಸರ್ಕಾರ 2019 ರಲ್ಲಿ ಐಡಿಬಿಐ ಬ್ಯಾಂಕ್ ಖಾಸಗೀಕರಣಗೊಳಿಸಿತ್ತು. ಕಳೆದ ನಾಲ್ಕು ವರ್ಷಗಳಲ್ಲಿ 14 ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳನ್ನು ವಿಲೀನಗೊಳಿಸಲಾಗಿದೆ.