Saturday, 23rd September 2023

ದೋಣಿ ಮುಳುಗಿ ನಾಲ್ವರು ಮೀನುಗಾರರ ಸಾವು

ಕೊಲ್ಲಂ: ಕೊಲ್ಲಂ ಕರಾವಳಿಯ ಅಝಿಕಲ್ ಬಳಿ ಮೀನುಗಾರಿಕಾ ದೋಣಿ ಮುಳುಗಿ ನಾಲ್ವರು ಮೀನುಗಾರರು ಮೃತಪಟ್ಟಿದ್ದಾರೆ. ದೋಣಿಯಲ್ಲಿದ್ದ ಇತರ 12 ಜನರನ್ನು ರಕ್ಷಿಸಲಾಗಿದೆ.

ಮೃತರನ್ನು ಕಾಯಂಕುಳಂ ನಿವಾಸಿಗಳಾದ ಸುದೇವನ್(51), ಸುನಿಲ್ ದತ್ (24), ಓಚಿರಾ ನಿವಾಸಿಗಳಾದ ಶ್ರೀಕುಮಾರ್ (45) ಮತ್ತು ನೆಡಿಯತ್‌ನ ತಂಕಪ್ಪನ್ (60) ಎಂದು ಗುರುತಿಸಲಾಗಿದೆ. ಬೆಳಗ್ಗೆ ಮೀನುಗಾರಿಕೆಗೆ ಅಲಪುಳಾದ ವಲಿಯಾ ಅಝಿಕಲ್ ಕರಾವಳಿಯಿಂದ ಹೊರಟ ‘ಓಮಕರಂ’ ಹೆಸರಿನ ದೋಣಿಯಲ್ಲಿ 16 ಮೀನು ಗಾರರಿದ್ದರು. ಅಝಿಕಲ್ ಬಂದರಿನಿಂದ ಐದು ನಾಟಿಕಲ್ ಮೈಲಿ ದೂರದಲ್ಲಿ ಈ ಘಟನೆ ನಡೆದಿದೆ.

ಮೀನುಗಾರಿಕೆ ಮುಗಿಸಿ ವಾಪಸ್ ಬರುತ್ತಿದ್ದಾಗ ದೋಣಿ ಅಪಘಾತಕ್ಕೀಡಾಗಿದೆ. ಬಲವಾದ ಗಾಳಿಯಿಂದಾಗಿ ದೋಣಿ ಮಗುಚಿದೆ ಎಂದು ಹೇಳಲಾಗಿದೆ.

ದಡದಲ್ಲಿ ಅನೇಕ ಮೀನುಗಾರರು ಇದ್ದ ಕಾರಣ, ತಕ್ಷಣ ರಕ್ಷಣಾ ಕಾರ್ಯಾಚರಣೆಗೆ ಧಾವಿಸಿ, 12 ಮೀನುಗಾರರನ್ನು ರಕ್ಷಿಸಿ ಚಿಕಿತ್ಸೆಗಾಗಿ ಕಾಯಂಕುಳಂ, ಓಚಿರಾ ಮತ್ತು ಕರುಣಗಪ್ಪಲ್ಲಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!