Saturday, 7th September 2024

ಹಣಕ್ಕಾಗಿ ಬಾಲಕನ ಅಪಹರಿಸಿ ಹತ್ಯೆ

ಮಹಾರಾಷ್ಟ್ರ: ಹಾರಾಷ್ಟ್ರದಲ್ಲಿ ಹಣಕ್ಕಾಗಿ ಬಾಲಕನನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಮಹಾರಾಷ್ಟ್ರದ ಬದ್ಲಾಪುರ್‌ನಲ್ಲಿ ಒಂಬತ್ತು ವರ್ಷದ ಬಾಲಕನನ್ನು ಮಸೀದಿಯಲ್ಲಿ ಸಂಜೆಯ ಪ್ರಾರ್ಥನೆಯ ವೇಳೆ ದುಷ್ಕರ್ಮಿ ಗಳು ಎಳೆದೊಯ್ದಿದ್ದಾರೆ. ಆರೋಪಿಯ ಮನೆಯಲ್ಲಿ ಗೋಣಿಚೀಲದಲ್ಲಿ ಬಾಲಕನ ಶವ ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿ ದಂತೆ ಇಬ್ಬರನ್ನು ಬಂಧಿಸಲಾಗಿದೆ.

4ನೇ ತರಗತಿಯಲ್ಲಿ ಓದುತ್ತಿದ್ದ ಇಬಾದ್, ರಂಜಾನ್ ಹಬ್ಬದ ಪ್ರಯುಕ್ತ ಸಂಜೆ ಪ್ರಾರ್ಥನೆ ಸಲ್ಲಿಸಲು ಮಸೀದಿಗೆ ತೆರಳಿದ್ದರು. ರಾತ್ರಿ ಯಾದರೂ ಮನೆಗೆ ಬಾರದೇ ಇದ್ದಾಗ ಮನೆಯವರು ಆತಂಕಗೊಂಡು ಅಕ್ಕಪಕ್ಕದಲ್ಲಿ ಹುಡುಕಾಟ ಆರಂಭಿಸಿದ್ದರು.

ಬಳಿಕ ಇಬಾದ್‌ನ ಪೋಷಕರಿಗೆ ಅನಾಮಧೇಯ ಕರೆ ಬಂದಿದ್ದು, ಆತನನ್ನು ಕಿಡ್ನಾಪ್ ಮಾಡಲಾಗಿದೆ ಎಂದು ಅಪಹರಣಕಾರರು ಹೇಳಿದ್ದಲ್ಲದೆ 25 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಟೈಲರ್ ಆಗಿರುವ ಆತನ ತಂದೆ ಮುದಾಸಿರ್ ಬುಬರ್ ಕುಲಗಾಂವ್ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಸ್.ಸ್ವಾಮಿ ನೇತೃತ್ವದಲ್ಲಿ ಬದ್ಲಾಪುರ ಪೊಲೀಸರು ಹಾಗೂ ಅಪರಾಧ ವಿಭಾಗದ ಪೊಲೀಸರು ಗೋರೆಗಾಂವ್ ಪ್ರದೇಶದಲ್ಲಿ ರಾತ್ರಿಯಿಡೀ ಇಬಾದ್‌ಗಾಗಿ ಹುಡುಕಾಟ ನಡೆಸಿದ್ದರು. ಪೊಲೀಸರು ಕರೆ ಬಂದ ನಂಬರ್ ಟ್ರೇಸ್ ಮಾಡಿ ಅಪಹರಣಕಾರನ ಮನೆ ತಲುಪಿದ್ದಾರೆ. ಅಷ್ಟೊತ್ತಿಗಾಗಲೇ ಪೊಲೀಸರು ತಮ್ಮ ಮನೆಗೆ ಬರುತ್ತಿರುವುದು ಆರೋಪಿಗೆ ಅರಿವಾಗಿತ್ತು.

ಪೊಲೀಸರು ತಮ್ಮ ಮನೆಗೆ ಬಂದು ತನಿಖೆ ನಡೆಸುತ್ತಾರೆ ಎಂಬ ಭಯದಿಂದ ಆರೋಪಿಗಳು ಇಬಾದ್ ನನ್ನು ಕೊಂದು ಗೋಣಿ ಚೀಲದಲ್ಲಿ ಶವವನ್ನು ತುಂಬಿ ಮನೆಯ ಹಿಂದೆ ಬಚ್ಚಿಟ್ಟಿದ್ದರು. ನಂತರ ಪೊಲೀಸರು ಗೋಣಿಚೀಲವನ್ನು ವಶಪಡಿಸಿಕೊಂಡರು.

ಇಬಾದ್ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಕೊಲೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿ ದ್ದಾರೆ ಎಂದು ಎಸ್ಪಿ ಡಿಎಸ್ ಸ್ವಾಮಿ ತಿಳಿಸಿದ್ದಾರೆ. ಅಪರಾಧದ ಉದ್ದೇಶದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದೂ ಅವರು ಹೇಳಿದರು.

Leave a Reply

Your email address will not be published. Required fields are marked *

error: Content is protected !!