Saturday, 7th September 2024

ರಾಷ್ಟ್ರಪತಿ ಕೋವಿಂದ್ ಬೈಪಾಸ್ ಸರ್ಜರಿ ಯಶಸ್ವಿ

ನವದೆಹಲಿ: ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಯಶಸ್ವಿ ಬೈಪಾಸ್ ಸರ್ಜರಿ ನಡೆಸ ಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

ರಾಷ್ಟ್ರಪತಿ ಕೋವಿಂದ್ ಅವರನ್ನ ಶನಿವಾರ ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ದೆಹಲಿಯ ಬೈಪಾಸ್ʼಗೆ ಸ್ಥಳಾಂತರಿಸಲಾಗಿತ್ತು. ಯಶಸ್ವಿ ಶಸ್ತ್ರಚಿಕಿತ್ಸೆಗೆ ನಾನು ವೈದ್ಯರ ತಂಡವನ್ನ ಅಭಿನಂದಿಸುತ್ತೇನೆ. ಏಮ್ಸ್ ನಿರ್ದೇಶಕ ರನ್ನ ಮಾತನಾಡಿಸಿ, ರಾಷ್ಟ್ರಪತಿಗಳ ಆರೋಗ್ಯ ವಿಚಾರಿಸಿದ್ದೇನೆ. ಅವರ ಆರೋಗ್ಯ ಮತ್ತು ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸ ಲಾಗುತ್ತಿದೆ’ ಎಂದು ರಕ್ಷಣಾ ಸಚಿವರು ತಿಳಿಸಿದ್ದಾರೆ.

ಶುಕ್ರವಾರ ಎದೆ ನೋವಿನ ಹಿನ್ನೆಲೆಯಲ್ಲಿ ದೆಹಲಿಯ ಸೇನಾ ಆಸ್ಪತ್ರೆಯಲ್ಲಿ (ಆರ್ ಆಯಂಡ್ ಆರ್ ) ಆರೋಗ್ಯ ತಪಾಸಣೆಗೆ ಒಳಗಾಗಿದ್ದರು. ರಾಷ್ಟ್ರಪತಿಗಳ ಆರೋಗ್ಯ ಸ್ಥಿರವಾಗಿದ್ದು, ಅವರು ಏಮ್ಸ್ ನ ತಜ್ಞರ ಆರೈಕೆಯಲ್ಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಈ ಮೊದಲು ಶನಿವಾರ ವೈದ್ಯಕೀಯ ಬುಲೆಟಿನ್ʼನಲ್ಲಿ, ಹೆಚ್ಚಿನ ಚಿಕಿತ್ಸೆಗಾಗಿ ರಾಷ್ಟ್ರಪತಿಯನ್ನು ದೆಹಲಿಯ ಏಮ್ಸ್ʼಗೆ ಶಿಫಾರಸು ಮಾಡಲಾಗಿದೆ ಎಂದು ಸೇನಾ ಆಸ್ಪತ್ರೆ ತಿಳಿಸಿತ್ತು.

 

Leave a Reply

Your email address will not be published. Required fields are marked *

error: Content is protected !!