Saturday, 26th October 2024

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹೈದರಾಬಾದ್​ನಲ್ಲಿ ಪ್ರಕರಣ ದಾಖಲು

ಹೈದರಾಬಾದ್​: ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ, ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹೈದರಾಬಾದ್​ನಲ್ಲಿ ಪ್ರಕರಣ ದಾಖಲಾಗಿದೆ.

ತೇಜಸ್ವಿ ಅವರು ಉಸ್ಮೇನಿಯಾ ವಿಶ್ವವಿದ್ಯಾಲಯದ ಮೇಲೆ ಅತಿಕ್ರಮಣ ಮಾಡಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ಬಿಜೆಪಿ ಪರ ಪ್ರಚಾರಕ್ಕೆ ಹೈದರಾಬಾದ್​ ತೆರಳಿದ್ದ ತೇಜಸ್ವಿ ತಮ್ಮ ಪಕ್ಷದ ಬೆಂಬಲಿಗರೊಂದಿಗೆ ಉಸ್ಮೇನಿಯಾ ವಿಶ್ವವಿದ್ಯಾಲಯಕ್ಕೆ ತೆರಳಿದ್ದರು. ಆದರೆ ಪ್ರವೇಶದ್ವಾರದಲ್ಲಿ ಬೇಲಿ ಹಾಕಿ ಸಂಸದರನ್ನು ತಡೆಯಲಾಗಿತ್ತು.

ಹೀಗಾಗಿ, ಬೇಲಿಯನ್ನು ತೆರವುಗೊಳಿಸಿ ವಿವಿ ಪ್ರವೇಶಿಸಿದ್ದರು. ತಮ್ಮ ಅನುಮತಿ ಇಲ್ಲದೆಯೆ ಬೇಲಿ ತೆರವುಗೊಳಿಸಿ ವಿವಿಗೆ ನುಗ್ಗಿರು ವುದಾಗಿ ವಿಶ್ವವಿದ್ಯಾಲಯ ದೂರಿದೆ.