Monday, 16th September 2024

ಬಿಪಿನ್ ರಾವತ್ ನಿಧನಕ್ಕೆ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಸಂತಾಪ

Dalai Lama

ಟಿಬೆಟ್: ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಇತರರ ನಿಧನಕ್ಕೆ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಸಂತಾಪ ಸೂಚಿಸಿದ್ದಾರೆ.

ಜನರಲ್ ಬಿಪಿನ್ ರಾವತ್ ಮತ್ತು ಅವರ ಸಹಚರರಿಗಾಗಿ ನಾನು ಪ್ರಾರ್ಥಿಸುತ್ತೇನೆ. ಈ ದುರದೃಷ್ಟಕರ ಅಪಘಾತದಲ್ಲಿ  ಮೃತಪಟ್ಟ ಎಲ್ಲ ಕುಟುಂಬಗಳ ಸದಸ್ಯರಿಗೆ ನನ್ನ ಹೃತ್ಪೂರ್ವಕ ಸಂತಾಪವನ್ನು ಅರ್ಪಿಸುತ್ತೇನೆ. ರಾಷ್ಟ್ರದ ಸೇವೆಯಲ್ಲಿ ಜನರಲ್ ರಾವತ್ ಅವರ ದೀರ್ಘಕಾಲದ ಕೊಡುಗೆಯನ್ನು ನಾನು ವಂದಿಸುತ್ತೇನೆ’ ಎಂದು ದಲೈಲಾಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಭಾರತೀಯ ವಾಯುಪಡೆಯ MI-17ವಿ5 ಹೆಲಿಕಾಪ್ಟರ್ ಬುಧವಾರ ನೀಲಗಿರಿಯ ಕಟ್ಟೇರಿಯಲ್ಲಿ ಪತನಗೊಂಡ ನಂತರ ಜನರಲ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು 12 ರಕ್ಷಣಾ ಸಿಬ್ಬಂದಿ ಮೃತಪಟ್ಟಿದ್ದರು.