Monday, 16th September 2024

ಯಾವುದೇ ಡಿಎ ಪಾವತಿಸಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ನೌಕರರಿಗೆ ಇನ್ನು ಮುಂದೆ ಯಾವುದೇ ಡಿಎ ಪಾವತಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರಿ ನೌಕರರ ವೇತನ ಭತ್ಯೆಗೆ ಸರಿಸಮಾನವಾಗಿ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಿಸುವ ಕುರಿತು ಪ್ರತಿಭಟನೆ ನಡೆಯುತ್ತಿರುವ ನಡುವೆಯೇ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ದಯವಿಟ್ಟು ನನ್ನ ತಲೆಯನ್ನು ಕಡಿಯಿರಿ ಮತ್ತು ನಂತರ ನೀವು ತೃಪ್ತರಾಗುತ್ತೀರಿ ಎಂದು ಭಾವಿಸುತ್ತೇವೆ. ನಿಮಗೆ ಇಷ್ಟವಾಗದಿದ್ದರೆ ನನ್ನ ತಲೆಯನ್ನು ಕತ್ತರಿಸಿ. ಆದರೆ ನೀವು ನನ್ನಿಂದ ಏನನ್ನೂ ಪಡೆಯಲು ಸಾಧ್ಯವಿಲ್ಲ ಎಂದರು.

ಕೇಂದ್ರ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳ ವೇತನ ರಚನೆಗಳಲ್ಲಿನ ವ್ಯತ್ಯಾಸವನ್ನು ಉಲ್ಲೇಖಿಸಿದ ಬಂಗಾಳ ಸಿಎಂ, ಟಿಎಂಸಿ ಸರ್ಕಾರವು ಈಗಾಗಲೇ ತನ್ನ ಉದ್ಯೋಗಿಗಳಿಗೆ ಶೇಕಡ 105 ರಷ್ಟು ಡಿಎ ನೀಡುತ್ತಿದೆ. ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ ಮತ್ತು ತ್ರಿಪುರಾ ಸರ್ಕಾರಗಳು ಡಿಎ ನೀಡುತ್ತಿಲ್ಲ. ನಿವೃತ್ತ ರಾಜ್ಯ ಸರ್ಕಾರಿ ನೌಕರರಿಗೆ ಪಿಂಚಣಿಯನ್ನು ಪಶ್ಚಿಮ ಬಂಗಾಳದಲ್ಲಿ ಮಾತ್ರ ನೀಡಲಾಗುತ್ತದೆ ಎಂದು ಹೇಳಿದರು.

ಬ್ಯಾನರ್ಜಿ ನೇತೃತ್ವದ ಸರ್ಕಾರವು ಈ ವರ್ಷದ ಬಜೆಟ್‌ನಲ್ಲಿ ತನ್ನ ಉದ್ಯೋಗಿಗಳಿಗೆ ಡಿಎಯನ್ನು ಶೇಕಡಾ ಮೂರ ರಷ್ಟು ಹೆಚ್ಚಿಸಿದೆ. ಆರನೇ ವೇತನ ಆಯೋಗದ ಶಿಫಾರಸುಗಳನ್ನು ಅನುಸರಿಸಿ ಮಾರ್ಚ್ 1, 2023 ರಿಂದ ಜಾರಿಗೆ ಬರುವಂತೆ ನೌಕರರು, ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರಿಗೆ ಅವರ ಮೂಲ ವೇತನದ ಶೇಕಡಾ ಆರು ದರದಲ್ಲಿ ಡಿಎ ಅನುದಾನಕ್ಕಾಗಿ ಅಧಿಸೂಚನೆಯನ್ನು ಸಹ ಹೊರಡಿಸಿದೆ.