Sunday, 8th September 2024

ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಪೋಸ್ಟ್‌: ಐವರ ಬಂಧನ

ನವದೆಹಲಿ: ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ಗಳನ್ನು ಮಾಡಿದ ಆರೋಪದ ಮೇಲೆ ಐವರನ್ನು ಬಂಧಿಸಲಾಗಿದೆ.

ಸುಪ್ರೀಂಕೋರ್ಟ್‌ ಹಾಗೂ ಆಂಧ್ರಪ್ರದೇಶ ಹೈಕೋರ್ಟ್‌ ನ್ಯಾಯಮೂರ್ತಿಗಳ ವಿರುದ್ಧ ಆರೋಪಿ ಗಳು ಅವಹೇಳನಕಾರಿ ಪೋಸ್ಟ್‌ಗಳನ್ನು ಹಾಕುತ್ತಿದ್ದು, ಸಿಬಿಐ ಅಧಿಕಾರಿಗಳು ಅವರನ್ನು ಬಂಧಿಸಿ ದ್ದಾರೆ. ಪಟ್ಟಾಪು ಆದರ್ಶ, ಲವನೂರು ಸಾಂಬಶಿವರೆಡ್ಡಿ, ಧಾಮಿ ರೆಡ್ಡಿ, ಪಾಮುಲ ಸುಧೀರ್‌ ಹಾಗೂ ಲಿಂಗಾರೆಡ್ಡಿ ಬಂಧಿತರು.

ಕೃತ್ಯದಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಮುಖಂಡರಾದ ಲೋಕಸಭಾ ಸದಸ್ಯ ನಂದಿಗಂ ಸುರೇಶ್‌ ಹಾಗೂ ಅಮಂಚಿ ಕೃಷ್ಣಮೋಹನ್ ಅವರ ಪಾತ್ರವಿರುವ ಶಂಕೆ ವ್ಯಕ್ತವಾಗಿದ್ದು, ಇಬ್ಬರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ಇವರ ಚಲನವಲನಗಳ ಮೇಲೆ ಕಣ್ಣಿಡಲಾಗಿದೆ ಎಂದು ವರದಿ ಯಾಗಿದೆ. ಇನ್ನಷ್ಟು ತನಿಖೆಯಿಂದ ಪಿತೂರಿ ಏನೆಂಬುದು ಹೊರಬೀಳಲು ಸಾಧ್ಯ’ ಎಂದು ಸಿಬಿಐ ವಕ್ತಾರ ಆರ್‌.ಸಿ.ಜೋಶಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!