Sunday, 8th September 2024

ಪ್ರೀತಿಯನ್ನು ನಿರಾಕರಿಸಿದ ಬಾಲಕಿಗೆ ಇರಿದ ಆರೋಪಿ ಶವವಾಗಿ ಪತ್ತೆ

ತಿರುಚ್ಚಿ: ತಮಿಳುನಾಡಿನ ತಿರುಚ್ಚಿಯಲ್ಲಿ 16 ವರ್ಷದ ಬಾಲಕಿ, ತನ್ನ ಪ್ರೀತಿ ಯನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದಕ್ಕಾಗಿ ಯುವಕ ಆಕೆಯನ್ನು 14 ಬಾರಿ ಇರಿದಿದ್ದಾನೆ. ಆರೋಪಿ ವ್ಯಕ್ತಿಯನ್ನು ಕೇಶವನ್‌’ಗಾಗಿ ಶೋಧ ನಡೆಸಿದಾಗ ಶವವಾಗಿ ಪತ್ತೆಯಾಗಿದ್ದಾನೆ.

ತಿರುಚ್ಚಿಯ ಅತಿಕುಲಂ ನಿವಾಸಿ ಬಾಲಕಿ 11ನೇ ತರಗತಿಯಲ್ಲಿ ಓದುತ್ತಿದ್ದಳು. ಪರೀಕ್ಷೆ ಮುಗಿಸಿ ತನ್ನ ಸಂಬಂಧಿಯನ್ನು ಭೇಟಿಯಾಗಲು ತೆರಳುತ್ತಿದ್ದಾಗ ಆರೋಪಿ ಕೇಶವನ್ ರೈಲ್ವೇ ಮೇಲ್ಸೇತುವೆ ಬಳಿ ತಡೆದಿದ್ದಾನೆ.

ಕೇಶವನ್ ಬಾಲಕಿಯನ್ನು ಹಿಂಬಾಲಿಸುತ್ತಿದ್ದ ಎನ್ನಲಾಗಿದೆ. ಜೂನ್ 2021ರಲ್ಲಿ ಅದೇ ಹುಡುಗಿಯನ್ನು ಅಪಹರಿಸಿದ್ದಕ್ಕಾಗಿ ಕೇಶವನ್ ರನ್ನು ಈಗಾಗಲೇ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸ ಲಾಗಿದೆ. ಈತ ಇತ್ತೀಚೆಗೆ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.

ಬಾಲಕಿ ಆತನ ಪ್ರೀತಿ ನಿರಾಕರಿಸಿದಾಗ ಚಾಕುವಿನಿಂದ ಇರಿದಿದ್ದಾನೆ. ಬಾಲಕಿ ಸಹಾಯಕ್ಕಾಗಿ ಕೂಗುವಾಗ ಕೇಶವನ್ ಆಕೆಗೆ 14 ಬಾರಿ ಇರಿದಿದ್ದಾನೆ. ಬಾಲಕಿ ಕೆಳಗೆ ಬಿದ್ದಿರುವುದನ್ನು ಕಂಡ ಪ್ರಯಾಣಿಕರು ಆಕೆಯ ದೇಹದಿಂದ ರಕ್ತ ಹರಿಯುತ್ತಿರುವುದನ್ನು ಗಮನಿಸಿದ್ದಾರೆ. ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆಕೆ ಚಿಂತಾಜನಕ ಸ್ಥಿತಿಯಲ್ಲಿದ್ದು ಚಿಕಿತ್ಸೆ ಪಡೆಯು ತ್ತಿದ್ದಾರೆ ಎಂದು ವರದಿಯಾಗಿದೆ.

ಆರೋಪಿಯನ್ನು ತಿರುಚ್ಚಿಯ ಪೋತಮೆಟ್ಟುಪಟ್ಟಿ ನಿವಾಸಿ ಕೇಶವನ್ ಎಂದು ಗುರುತಿಸಿರುವ ಪೊಲೀಸರು ಆತನಿಗಾಗಿ ಶೋಧ ನಡೆಸುತ್ತಿದ್ದಾರೆ.ಆತನ ಪತ್ತೆಗೆ ಮೂರು ವಿಶೇಷ ತಂಡಗಳು ಶೋಧ ನಡೆಸುತ್ತಿದ್ದವು. ಮಂಗಳವಾರ ರಾತ್ರಿ ರೈಲ್ವೆ ಹಳಿ ಮೇಲೆ ಆರೋಪಿ ಶವವಾಗಿ ಪತ್ತೆಯಾಗಿ ದ್ದಾನೆ.

error: Content is protected !!