Monday, 16th September 2024

ಅರ್ನಬ್‌ ಬಂಧಿಸುವ ಮುನ್ನ, ನೋಟೀಸು ನೀಡಿ: ಬಾಂಬೆ ಹೈಕೋರ್ಟ್

ಮುಂಬೈ: ನಕಲಿ ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿ.ವಿ ಸಂಪಾದಕ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸುವುದಕ್ಕೆ ಮೂರು ದಿನದ ಮುನ್ನವೇ ನೋಟಿಸ್ ನೀಡಬೇಕು ಎಂದು ಬಾಂಬೆ ಹೈಕೋರ್ಟ್ ಬುಧವಾರ ಮುಂಬೈ ಪೊಲೀಸರಿಗೆ ನಿರ್ದೇಶನ ನೀಡಿದೆ.

ನಕಲಿ ಟಿಆರ್‌ಪಿ ಪ್ರಕರಣ ಸಂಬಂಧ ಗೋಸ್ವಾಮಿ ಹಾಗೂ ಎಆರ್‌ಜಿ ಸಲ್ಲಿಸಿದ್ದ ಹಲವು ಅರ್ಜಿಗಳ ವಿಚಾರಣೆಯನ್ನು ನ್ಯಾಯಾ ಲಯ ಬುಧವಾರ ನಡೆಸಿದ್ದು, ಪೊಲೀಸರಿಗೆ ಸೂಚನೆ ನೀಡಿದೆ. ತಮ್ಮ ವಿರುದ್ಧ ಯಾವುದೇ ಪುರಾವೆಗಳಿಲ್ಲದಿದ್ದರೂ ಮುಂಬೈ ಪೊಲೀಸ್ ಅಪರಾಧ ವಿಭಾಗವು ಚಾರ್ಜ್‌ಶೀಟ್‌ನಲ್ಲಿ ತಮ್ಮನ್ನು ಶಂಕಿತರೆಂದು ನಮೂದಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ಅರ್ಜಿದಾರರು ದೂರಿದ್ದರು.

ಸೋಮವಾರದ ವಿಚಾರಣೆಯಲ್ಲಿಯೂ ಕೋರ್ಟ್ ಮುಂಬೈ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದು, ಪ್ರಕರಣದಲ್ಲಿ ಯಾರನ್ನೂ ಆರೋಪಿಗಳೆಂದು ಹೆಸರಿಸದೇ ತಿಂಗಳುಗಟ್ಟಲೆ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಹೇಳಿತ್ತು. ಪೊಲೀಸರಿಗೆ ಗೋಸ್ವಾಮಿ ವಿರುದ್ಧದ ದಾಖಲೆಗಳಲ್ಲಿ ಯಾವುದೇ ಗಣನೀಯ ಮಾಹಿತಿ ದೊರೆತಿಲ್ಲ ಎಂದು ಅಭಿಪ್ರಾಯಪಟ್ಟಿತ್ತು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

Leave a Reply

Your email address will not be published. Required fields are marked *