Sunday, 8th September 2024

75ರ ಇಕ್ಕಟ್ಟು: ಉತ್ತರಪ್ರದೇಶ ವಿಧಾನಸಭಾ ಸ್ಪೀಕರ್’ಗೆ ಟಿಕೆಟ್‌ ಇಲ್ಲ

ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಶತಾಯಗತಾಯ ಗೆಲ್ಲಲೇಬೇಕೆಂಬ ಒತ್ತಡಕ್ಕೆ ಸಿಲುಕಿರುವ ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಪ್ರಯೋಗಗಳನ್ನು ಮಾಡುತ್ತಿದೆ. ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದ್ದು, ಹೊಸ ಮುಖಗಳಿಗೆ ಮಣೆ ಹಾಕಲಾಗುತ್ತಿದೆ.

75 ವರ್ಷ ದಾಟಿರುವ ಕಾರಣ, ಉತ್ತರಪ್ರದೇಶ ವಿಧಾನಸಭಾ ಸ್ಪೀಕರ್ ಹೃದಯ ನಾರಾಯಣ ದೀಕ್ಷಿತ್ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಕಡೆಪಕ್ಷ ತಮ್ಮ ಮಗನಿಗಾದರೂ ಭಗವಂತ್ ನಗರ ಕ್ಷೇತ್ರದಿಂದ ಟಿಕೆಟ್ ಕೊಡಿಸಬೇಕೆಂಬ ಪ್ರಯತ್ನದಲ್ಲಿದ್ದ ದೀಕ್ಷಿತ್ ಅವರಿಗೆ ಅಲ್ಲಿಯೂ ನಿರಾಸೆಯಾಗಿದೆ.

ಭಗವಂತ್ ನಗರ ಕ್ಷೇತ್ರದ ಟಿಕೆಟ್ ಅನ್ನು ಆಶುತೋಷ್ ಶುಕ್ಲಾರಿಗೆ ನೀಡಲಾಗಿದ್ದು, ಕಾನೂನು ಸಚಿವ ಬ್ರಿಜೇಶ್ ಪಾಠಕ್ ಅವರನ್ನು ಲಕ್ನೋ ಕಂಟೋ ನ್ಮೆಂಟ್ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಲಕ್ನೋ ಕೇಂದ್ರ ಕ್ಷೇತ್ರದಿಂದ ರಜನೀಶ್ ಗುಪ್ತಾ ಅವರನ್ನು ಕಣಕ್ಕಿಳಿಸಲಾಗಿದೆ. ಹೀಗಾಗಿ ಅಪರ್ಣಾ ಯಾದವರಿಗೆ ಯಾವ ಕ್ಷೇತ್ರದಿಂದ ಕಣಕ್ಕಿಳಿಸಬಹುದು ಎಂಬ ಕುತೂಹಲ ಮೂಡಿದೆ.

error: Content is protected !!