Monday, 16th September 2024

ಕಾಂಗ್ರೆಸ್‌ ಪಕ್ಷಕ್ಕೆ ಹಾರ್ದಿಕ್‌ ಪಟೇಲ್‌ ರಾಜೀನಾಮೆ

ಅಹಮದಾಬಾದ್‌: ಗುಜರಾತ್‌ನ ಪಾಟಿದಾರ್‌ ಸಮುದಾಯದ ಹಾರ್ದಿಕ್‌ ಪಟೇಲ್‌ ಕಾಂಗ್ರೆಸ್‌ ಪಕ್ಷಕ್ಕೆ ಬುಧವಾರ ರಾಜೀನಾಮೆ ನೀಡಿದರು.

ಮೇ 15 ರಂದು ಉದಯಪುರದಲ್ಲಿ ನಡೆದ ಕಾಂಗ್ರೆಸ್ ವರಿಷ್ಠರ ಮೂರು ದಿನಗಳ ಚಿಂತನ-ಮಂಥನ ಸಭೆಗೆ ಹಾರ್ದಿಕ್‌ ಪಟೇಲ್‌ ಗೈರಾಗಿದ್ದರು. ಈ ಘಟನೆಯ ಬೆನ್ನಲ್ಲೇ ಪಟೇಲ್‌ ಕಾಂಗ್ರೆಸ್‌ ತೊರೆದಿದ್ದಾರೆ.

ಪಾಟಿದಾರ್ ಸಮುದಾಯದ ಪ್ರಭಾವಿ ನಾಯಕ ನರೇಶ್ ಪಟೇಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಹಾರ್ದಿಕ್‌ ರಾಜೀನಾಮೆಯ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು ಕಾಂಗ್ರೆಸ್‌ ನಾಯಕತ್ವದ ವಿರುದ್ಧ ಗುಡುಗಿದ್ದಾರೆ.

ಪಟೇಲ್ ಅವರು ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂಬ ಊಹಾಪೋಹಗಳು ಗುಜರಾತ್‌ನಲ್ಲಿ ಹರಡಿವೆ.