Thursday, 19th September 2024

ಪಂಜಾಬ್ ಕಾಂಗ್ರೆಸ್ ಉಸ್ತುವಾರಿಯಾಗಿ ಹರೀಶ್ ಚೌಧರಿ ನೇಮಕ

ಚಂಡೀಘಡ: ಹರೀಶ್ ರಾವತ್ ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಸ್ಥಾನ ತೊರೆದಿದ್ದು, ಅವರ ಜಾಗಕ್ಕೆ ಹರೀಶ್ ಚೌಧರಿ ಅವರನ್ನು ಶುಕ್ರವಾರ ನೇಮಕ ಮಾಡಲಾಗಿದೆ. ಪಂಜಾಬಿನ ಎಐಸಿಸಿ ಕಾರ್ಯದರ್ಶಿ ಚೌಧರಿ ಅವರನ್ನು ಪಂಜಾಬ್ ಉಸ್ತುವಾರಿಯಾಗಿ ನೇಮಿಸಲಾಗಿದೆ.

ಮುಂಬರುವ ಉತ್ತರಾಖಂಡ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಂಜಾಬ್ ಉಸ್ತುವಾರಿ ಜವಾಬ್ದಾರಿಯಿಂದ ಬಿಡುಗಡೆ ಮಾಡಬೇಕೆಂದು ರಾವತ್ ಒತ್ತಾಯದ ನಂತರ ಕಾಂಗ್ರೆಸ್ ಹೈಕಮಾಂಡ್ ಈ ನಿರ್ಧಾರ ತೆಗೆದುಕೊಂಡಿದೆ.

ಪಂಜಾಬ್ ನ ಎಐಸಿಸಿ ಉಸ್ತುವಾರಿಯಾಗಿ ಹರೀಶ್ ಚೌಧರಿ ಅವರನ್ನು ಕಾಂಗ್ರೆಸ್ ಅಧ್ಯಕ್ಷರು ನೇಮಕ ಮಾಡಿದ್ದಾರೆ. ಹರೀಶ್ ರಾವತ್ ಅವರನ್ನು ಪಂಜಾಬಿನ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ತೆಗೆಯಲಾಗಿದೆ.

ಆದಾಗ್ಯೂ, ರಾವತ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮುಂದುವರೆಯಲಿದ್ದಾರೆ.