Sunday, 8th September 2024

ಉತ್ತರಾಖಂಡ ಸಂಕಷ್ಟ: 11 ಕೋಟಿ ರೂ. ಪರಿಹಾರ ಘೋಷಿಸಿದ ಹರ‍್ಯಾಣ ಸಿಎಂ

ಚಂಡೀಗಢ : ಉತ್ತರಾಖಂಡದ ಚಮೋಲಿಯಲ್ಲಿ ಗ್ಲೇಷಿಯರ್ ಸ್ಪೋಟದಿಂದ ನದಿಗಳು ಉಕ್ಕಿ ಹರಿದು ಪ್ರವಾಹ ಸ್ಥಿತಿ ಉಂಟಾಗಿ, 29 ಜನ ಸಾವನ್ನಪ್ಪಿದ್ದು, ಇನ್ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಹಿಮಪ್ರವಾಹದ ಸಂತ್ರಸ್ತರಿಗೆ ಹರಿಯಾಣ ಮುಖ್ಯ ಮಂತ್ರಿ ಮನೋಹರ್ ಲಾಲ್ ಖಟ್ಟರ್ ಸಹಾಯ ಮಾಡಲು ಮುಂದಾಗಿದ್ದಾರೆ.

ಮನೋಹರ್ ಲಾಲ್ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 11 ಕೋಟಿ ರೂ. ನೀಡುವುದಾಗಿ ಘೋಷಿಸಿದ್ದು, ಸರ್ಕಾರ ದಿಂದ ಉತ್ತರಾಖಂಡಕ್ಕೆ ಸಾಧ್ಯವಿರುವ ಎಲ್ಲ ಸಹಾಯ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

‘ದೇವಭೂಮಿ ಉತ್ತರಾಖಂಡದಲ್ಲಿ ಈ ನೈಸರ್ಗಿಕ ವಿಕೋಪದಿಂದ ಉಂಟಾಗುವ ಸಂದರ್ಭಗಳನ್ನು ಎದುರಿಸಲು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 11 ಕೋಟಿ ರೂ. ನೀಡಲಾಗುವುದು’ ಎಂದು ಅವರು ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!