Sunday, 8th September 2024

ಗಣರಾಜ್ಯೋತ್ಸವ ಹಿನ್ನೆಲೆ: ಭಾರತ-ಪಾಕಿಸ್ತಾನದ ಗಡಿಯಲ್ಲಿ ತೀವ್ರ ಕಟ್ಟೆಚ್ಚರ

ನವದೆಹಲಿ: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಿರುವ ಅಧಿಕಾರಿಗಳು, ಜಮ್ಮು ಮತ್ತು ಕಾಶ್ಮೀರದ ಗಡಿಗಳಲ್ಲಿ ಹೈ ಅಲರ್ಟ್ ಘೋಷಿಸಿ ದ್ದಾರೆ.

ಭಾರತ-ಪಾಕಿಸ್ತಾನದ ಗಡಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಅಂತರ್​ರಾಷ್ಟ್ರೀಯ ಗಡಿಯಲ್ಲಿ ಹೆಚ್ಚುವರಿ ಭದ್ರತಾ ಪಡೆಯನ್ನು ನಿಯೋಜಿಸ ಲಾಗಿದೆ. ಬಿಎಸ್‌ಎಫ್‌ನ ಜಮ್ಮು ಪ್ರಾಂತ್ಯದ ಐಜಿ ಡಿ.ಕೆ. ಬೂರಾ, ಎಲ್​​​ಒಸಿಯಲ್ಲಿ ಡ್ರೋನ್‌ ಹಾರಾಟದ ಮೇಲೆ ನಿಗಾ ವಹಿಸುವುದು ಸೇರಿದಂತೆ ವಿವಿಧ ಕಾರ್ಯಾಚರಣೆಗೆ ಬಿಎಸ್‌ಎಫ್‌ ಸನ್ನದ್ಧವಾಗಿದೆ ಎಂದು ಹೇಳಿದ್ದಾರೆ.

ಸೇನೆ, ಸಿಆರ್‌ಪಿಎಫ್‌, ಸ್ಥಳೀಯ ಪೊಲೀಸರ ಸಹಯೋಗದಲ್ಲಿ ಜಂಟಿ ಗಸ್ತು ಆರಂಭಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಭಾರತ-ಪಾಕಿಸ್ತಾನ ಗಡಿಯಲ್ಲಿ 2021ರಲ್ಲಿ 2 ರಹಸ್ಯ ಸುರಂಗಗಳನ್ನು ಪತ್ತೆ ಹಚ್ಚಲಾಗಿತ್ತು. ಆರು ಮಂದಿ ನುಸುಳುಕೋರರನ್ನು ಹತ್ಯೆ ಮಾಡಲಾಗಿತ್ತು ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಬಿಎಸ್‌ಎಫ್ ಸುರಂಗ ಪತ್ತೆ ಕಾರ್ಯಾಚರಣೆ ನಡೆಸಿತ್ತು.

error: Content is protected !!