Saturday, 27th July 2024

ಶ್ರಾವಸ್ತಿ: ಇಕೌನಾದಲ್ಲಿ ಭೀಕರ ಅಪಘಾತ: ಆರು ಸಾವು

ಶ್ರಾವಸ್ತಿ(ಉತ್ತರ ಪ್ರದೇಶ): ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯ ಇಕೌನಾ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ.

ಕಾರು ಹಳ್ಳಕ್ಕೆ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ. ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

“ಕಾರಿನಲ್ಲಿದ್ದವರು ಬಲರಾಮ್​ಪುರದಿಂದ ನೇಪಾಳದ ನೇಪಾಲ್​ಗಂಜ್​ ಪ್ರದೇಶಕ್ಕೆ ಹೋಗುತ್ತಿದ್ದರು. ಈ ವೇಳೆ ರಸ್ತೆ ಮಧ್ಯ ಬಂದ ದನವನ್ನು ಉಳಿಸಲು ಕಾರು ಚಾಲಕ ಪ್ರಯತ್ನಿಸಿದ್ದಾನೆ. ಆಗ ವಾಹನ ನಿಯಂತ್ರಣ ತಪ್ಪಿ ಬಹ್ರೇಚ್​​ ಬಲರಾಮ್​ಪುರ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಳ್ಳಕ್ಕೆ ಬಿದ್ದಿದೆ. ಆರು ಮಂದಿ ಸಾವನ್ನಪ್ಪಿದ್ದು, ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಆತನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಇಕೌನಾ ಪೊಲೀಸ್​ ಠಾಣೆಯ ಉಸ್ತುವಾರಿ ಮಹಿಮಾ ನಾಥ್​ ಉಪಾಧ್ಯಾಯ ತಿಳಿಸಿದ್ದಾರೆ.

ಸಾವನ್ನಪ್ಪಿದ್ದವರಲ್ಲಿ ನೇಪಾಳದ ನಿವಾಸಿಗಳಾದ 18 ವರ್ಷದ ನೀತಿ, 30 ವರ್ಷದ ನಿಲನ್ಶ್​ ಮತ್ತು ವೈಭವ್​ ಗುಪ್ತಾ ಸೇರಿದ್ದಾರೆ. ಉಳಿದವರ ಗುರುತು ಇನ್ನೂ ಪತ್ತೆಯಾಗಿಲ್ಲ. ಕಾರು ಚಾಲಕನ ಸ್ಥಿತಿ ತೀರಾ ಗಂಭೀರವಾಗಿದೆ.

 

Leave a Reply

Your email address will not be published. Required fields are marked *

error: Content is protected !!