Sunday, 8th September 2024

ಡಿವಿ ಸದಾನಂದಗೌಡ, ಸಂತೋಷ್ ಗಂಗ್ವಾರ್, ರಮೇಶ್ ಪೋಖ್ರಿಯಾಲ್, ದೇಬಶ್ರೀ ಚೌಧರಿ ರಾಜೀನಾಮೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಎರಡನೇ ಅವಧಿಯಲ್ಲಿ ಮೊದಲ ಬೃಹತ್ ಸಂಪುಟ ಪುನಾರಚನೆಗೆ ಮುಂಚಿತವಾಗಿ ಸಚಿವರಾದ ಡಿವಿ ಸದಾನಂದಗೌಡ, ಸಂತೋಷ್ ಗಂಗ್ವಾರ್, ರಮೇಶ್ ಪೋಖ್ರಿಯಾಲ್ ‘ನಿಶಾಂಕ್’ ಮತ್ತು ದೇಬಶ್ರೀ ಚೌಧರಿ ಅವರು ಬುಧವಾರ ರಾಜೀನಾಮೆ ನೀಡಿದರು.

ಜ್ಯೋತಿರಾದಿತ್ಯ ಸಿಂಧಿಯಾ, ಸರ್ಬಾನಂದ ಸೋನೊವಾಲ್, ನಾರಾಯಣ್ ರಾಣೆ ಮತ್ತು ಪಶುಪತಿ ನಾಥ್ ಪರಾಸ್ ಅವರಂತಹ ಹೆಸರುಗಳು ಹೊಸ ಸಂಪುಟ ಸೇರ್ಪಡೆಯಾಗಲಿದೆ ಎಂಬುದಾಗಿ ಕೇಳಿ ಬರುತ್ತಿದೆ.

ಕೇಂದ್ರ ಸಚಿವ ಸಂಪುಟ ಪುನರಚನೆಯ ಸಮಯ ಸಮೀಪಿಸುತ್ತಿರುವಾಗಲೇ, ಈ ಬೆಳವಣಿಗೆ ನಡೆದಿದೆ. ಅಲ್ಲದೇ ಬಲ್ಲ ಮೂಲಗಳ ಪ್ರಕಾರ 43 ನೂತನ ಸಚಿವರು ಮೋದಿ ಕ್ಯಾಬಿನೆಟ್ ಗೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗಿದೆ.

ಇದು ‘ಅತ್ಯಂತ ಕಿರಿಯ’ ಕ್ಯಾಬಿನೆಟ್ ಆಗಿರುತ್ತದೆ. ಒಬಿಸಿಗಳು, ಎಸ್ಸಿಗಳು ಮತ್ತು ಎಸ್ಟಿಗಳ ದಾಖಲೆಯ ಪ್ರಾತಿನಿಧ್ಯ ಮತ್ತು ಹೆಚ್ಚಿನ ಮಹಿಳಾ ಆಯ್ಕೆಗಳನ್ನು ಹೊಂದಿರುತ್ತದೆ. ಪ್ರತಿಯೊಂದು ರಾಜ್ಯ ಮತ್ತು ಅವುಗಳ ಸಂಬಂಧಿತ ಪ್ರದೇಶಗಳ ಮೇಲೆ ಗಮನ ಕೇಂದ್ರೀಕರಿಸಿ, ಸಣ್ಣ ಸಮುದಾಯಗಳಿಗೂ ಪ್ರಾತಿನಿಧ್ಯ ವನ್ನು ಒದಗಿಸುವುದು ಸರ್ಕಾರದ ಯೋಜನೆಯಾಗಿದೆ.

Leave a Reply

Your email address will not be published. Required fields are marked *

error: Content is protected !!