Friday, 20th September 2024

ರೈತರ ಕಿಚ್ಚು ಹರಡದಂತೆ ತಡೆಯಲು ಕ್ರಮ: ರಾತ್ರಿ 12 ಗಂಟೆಯವರೆಗೆ ಇಂಟರ್ನೆಟ್ ಸೇವೆ ಸ್ಥಗಿತ

ನವದೆಹಲಿ : ರೈತರ ಕಿಚ್ಚು ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿದೆ. ದೆಹಲಿಯಲ್ಲಿ ರೈತರ ಪ್ರತಿಭಟನೆ ತಾರಕಕ್ಕೇರುತ್ತಿರುವ ಬೆನ್ನಲ್ಲೇ, ಸಿಂಘು ಗಡಿ, ಗಾಜೀಪುರ ಗಡಿ, ತಿಕ್ರಿ ಗಡಿ, ಮುಕ್ರಬಾ ಚೌಕ್ ಹಾಗೂ ನಂಗೋಲಿ ಸೇರಿದಂತೆ ಅನೇಕ ಪ್ರದೇಶದಲ್ಲಿ ರಾತ್ರಿ 12 ಗಂಟೆಯವರೆಗೆ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ದೆಹಲಿಯಲ್ಲಿ ಕೇಂದ್ರ ಕೃಷಿ ಕಾಯ್ದೆಯ ವಿರುದ್ಧ ನಡೆಯುತ್ತಿರುವ ರೈತರ ಟ್ರ್ಯಾಕ್ಟರ್ ಪೆರೇಡ್ ಪಥ ಸಂಚಲನದ ಪ್ರತಿಭಟನೆ, ತೀವ್ರ ಸ್ವರೂಪ ಪಡೆದುಕೊಂಡಿದೆ. ಕೆಂಪು ಕೋಟೆಗೆ ಮುತ್ತಿಗೆ ಹಾಕಿರುವ ರೈತರು, ರಾಷ್ಟ್ರದ ರಾಜಧಾನಿಯಲ್ಲಿ ತಮ್ಮ ಕಿಚ್ಚನ್ನು ಮೊಳಗಿಸಿದ್ದಾರೆ.

ರೈತರ ಪ್ರತಿಭಟನೆ ತೀವ್ರಗೊಂಡಿರುವ ಸಿಂಘು, ತಿಕ್ರಿ ಹಾಗೂ ಗಾಜಿಪುರ್ ಪ್ರದೇಶದಲ್ಲಿ ಕೇಂದ್ರ ಗೃಹ ಇಲಾಖೆಯ ಸೂಚನೆಯ ಮೇರೆಗೆ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.