Friday, 20th September 2024

ನರಬಲಿ ಹತ್ಯೆ ಪ್ರಕರಣ: ಮೂವರಿಗೆ ನ್ಯಾಯಾಂಗ ಬಂಧನ

ರ್ನಾಕುಲಂ: ಮಾಟಮಂತ್ರದ ವಿಧಿವಿಧಾನಗಳಲ್ಲಿ ಇಬ್ಬರು ಮಹಿಳೆಯರನ್ನು ನರಬಲಿಯಾಗಿ ಹತ್ಯೆಗೈದ ಆರೋಪದ ಮೇಲೆ ಎರ್ನಾಕುಲಂ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮೂವರು ಆರೋಪಿಗಳನ್ನು ಬುಧವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಅದು ಅ.26 ರಂದು ಕೊನೆಗೊಳ್ಳಲಿದೆ. ಆರೋಪಿಗಳನ್ನು ಎರ್ನಾ ಕುಲಂ ಜಿಲ್ಲಾ ಸೆಷನ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಮಹಿಳೆ ಸೇರಿದಂತೆ ಮೂವರು ಆಮಿಷವೊಡ್ಡಿ ಇಬ್ಬರು ಮಹಿಳೆಯನ್ನು ನರಬಲಿಯಾಗಿ ಹತ್ಯೆಗೈದಿದ್ದಾರೆ. ಮಹಿಳೆಯರು ನಾಪತ್ತೆಯಾದ 24 ಗಂಟೆಗಳಲ್ಲಿ ಪತ್ತನಂತಿಟ್ಟ ಜಿಲ್ಲೆಯ ಮನೆಯೊಂದರಲ್ಲಿ ಸಮಾಧಿಯಾಗಿರುವ ಸ್ಥಿತಿಯಲ್ಲಿ ಎರಡು ಛಿದ್ರಗೊಂಡ ಶವಗಳು ಪತ್ತೆಯಾಗಿವೆ ಎಂದು ನಗರ ಪೊಲೀಸ್ ಆಯುಕ್ತ ಸಿ.ಎಚ್.ನಾಗರಾಜು ಖಚಿತಪಡಿಸಿದ್ದಾರೆ.