Thursday, 19th September 2024

ವಾಜೆಗೆ ಏ.23 ರವರೆಗೆ ನ್ಯಾಯಾಂಗ ಬಂಧನ

ಮುಂಬೈ: ಉದ್ಯಮಿ ಅಂಬಾನಿ ಮನೆಯ ಸಮೀಪ ಸ್ಫೋಟಕ ತುಂಬಿದ್ದ ವಾಹನ ನಿಲ್ಲಿಸಿದ್ದ ಪ್ರಕರಣ ಹಾಗೂ ಉದ್ಯಮಿ ಮನ್ಸುಖ್ ಹಿರೇನ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಅಮಾನತುಗೊಂಡಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ರನ್ನು ಏ.23 ರವರೆಗೆ ನ್ಯಾಯಾಂಗ ವಶಕ್ಕೆ ನೀಡಿ ಎನ್‌ಐಎ ವಿಶೇಷ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ.

ಮಾ.13ರಂದು ವಾಜೆಯನ್ನು ಬಂಧಿಸಲಾಗಿತ್ತು. ಎನ್‌ಐಎ ವಿಚಾರಣೆ ಮುಗಿದ ಬಳಿಕ ವಾಜೆ ಅವರನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಶೇಷ ನ್ಯಾಯಾಧೀಶರಾದ ಪಿ.ಆರ್. ಸಿತ್ರೆ ಅವರು ವಾಜೆ ಅವರನ್ನು ಏ. 23ರ ತನಕ ನ್ಯಾಯಾಂಗ ವಶಕ್ಕೆ ನೀಡುವಂತೆ ಆದೇಶಿಸಿದರು.

ಫೆ.25ರಂದು ಮುಕೇಶ್ ಅಂಬಾನಿ ಮನೆ ಬಳಿ ಸ್ಫೋಟಕ ತುಂಬಿದ್ದ ವಾಹನ ಪತ್ತೆ ಹಾಗೂ ಮಾರ್ಚ್ 5ರಂದು ಮನ್ಸುಖ್ ಹಿರೇನ್ ಅವರನ್ನು ನಿಗೂಢವಾಗಿ ಹತ್ಯೆ ಮಾಡಲಾಗಿತ್ತು. ಈ ಎರಡೂ ಪ್ರಕರಣಗಳಲ್ಲಿ ವಾಜೆ ಅವರ ಪಾತ್ರ ಇರುವುದನ್ನು ಪುಷ್ಟೀಕರಿಸಲು ಹಲವು ಸಾಕ್ಷ್ಯಾಧಾರಗಳು ದೊರೆತಿದ್ದವು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

Leave a Reply

Your email address will not be published. Required fields are marked *