Saturday, 7th September 2024

ಎನ್’ಎಚ್’ಆರ್‌’ಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನ್ಯಾ.ಮಿಶ್ರಾ

ನವದೆಹಲಿ: ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಅರುಣ್‌ ಕುಮಾರ್ ಮಿಶ್ರಾ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಬುಧವಾರ ಅಧಿಕಾರ ವಹಿಸಿದರು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ನಿಂದ ನಿವೃತ್ತ ರಾದರು.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ರಾಜ್ಯಸಭೆಯ ಉಪ ಸಭಾಪತಿ ಹರಿವಂಶ್‌, ಲೋಕಸಭೆಯ ಸ್ಪೀಕರ್‌ ಓಂ ಬಿರ್ಲಾ ಹಾಗೂ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಒಳಗೊಂಡ ಸಮಿತಿಯು ನಿವೃತ್ತ ನ್ಯಾಯಮೂರ್ತಿ ಅರುಣ್‌ ಕುಮಾರ್‌ ಮಿಶ್ರಾ ಅವರ ಹೆಸರನ್ನು ಶಿಫಾರಸು ಮಾಡಿತ್ತು.

ಅರುಣ್‌ ಕುಮಾರ್ ಮಿಶ್ರಾ ಅವರು 1998-99ರಲ್ಲಿ ಭಾರತದ ಬಾರ್‌ ಕೌನ್ಸಿಲ್‌ಗೆ ಆಯ್ಕೆಯಾದ ಅತಿ ಕಿರಿಯ ಎಂಬ ಹೆಗ್ಗಳಿಕೆ ಮಿಶ್ರಾ ಅವರದು. ರಾಜಸ್ಥಾನ ಹೈಕೋರ್ಟ್‌ ಮತ್ತು ಕಲ್ಕತ್ತ ಹೈಕೋರ್ಟ್‌ಗಳಲ್ಲಿ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದರು.

2014ರ ಜುಲೈ 7ರಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕಗೊಂಡು 2020ರ ಸೆಪ್ಟೆಂಬರ್‌ 3ರವರೆಗೂ ಕರ್ತವ್ಯ ನಿರ್ವಹಿಸಿದರು.

Leave a Reply

Your email address will not be published. Required fields are marked *

error: Content is protected !!