Sunday, 8th September 2024

ಮಮತಾ ಆಪ್ತ ಕೌಸ್ತವ್ ರೇಗೆ ’ಜಂಟಿ’ ದಾಳಿ ಬಿಸಿ

ಕೋಲ್ಕತ್ತಾ: ಕೋಲ್ಕತ್ತಾ ಟಿವಿಯ ಸಿಇಒ ಕೌಸ್ತವ್ ರೇ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಮಂಗಳವಾರ ಜಾರಿ ನಿರ್ದೇಶನಾಲಯ ಮತ್ತು ಆದಾಯ ಇಲಾಖೆ ಜಂಟಿಯಾಗಿ ದಾಳಿ ನಡೆಸಿದೆ.

ಕೌಸ್ತವ್ ರೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತರು. ಈ ಹಿಂದೆಯೂ ಬ್ಯಾಂಕ್‌ಗೆ ಸಾಲ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿತ್ತು.

ಪಶ್ಚಿಮ ಬಂಗಾಳದಲ್ಲಿ ಜಾರಿ ನಿರ್ದೇಶನಾಲಯವು ಮಮತಾ ಬ್ಯಾನರ್ಜಿ ಅವರ ಆಪ್ತರ ಮೇಲೆ ದಾಳಿ ನಡೆಸುತ್ತಲೆ ಇದೆ. ಈ ಹಿಂದೆ ಸಚಿವರಾಗಿದ್ದ ಪಾರ್ಥ ಚರ್ಟರ್ಜಿ ಅವರನ್ನು ಬಂಧಿಸಿದೆ.

ಬಳಿಕ ಮಮತಾ ಬ್ಯಾನರ್ಜಿ ಅವರ ಆಪ್ತ ಸಹಾಯಕ ಹಾಗೂ ಟಿಎಂಸಿಯ ಬಿರ್ಭೂಮ್ ಜಿಲ್ಲಾಧ್ಯಕ್ಷ ಅನುಬ್ರತಾ ಮೊಂಡಲ್ ಅವರನ್ನು ಸಿಬಿಐ 2020 ರ ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿಸಿದೆ.

error: Content is protected !!