Monday, 16th September 2024

ವಯನಾಡ್’ಗೆ ಕಾಂಗ್ರೆಸ್​ ನಾಯಕ ರಾಹುಲ್​ ಭೇಟಿ ಇಂದು

ವಯನಾಡ್ (ಕೇರಳ): ಅನರ್ಹಗೊಂಡ ನಂತರ ಮೊದಲ ಬಾರಿಗೆ ಕಾಂಗ್ರೆಸ್ ಮಾಜಿ ಸಂಸದ ರಾಹುಲ್ ಗಾಂಧಿ ಅವರು ಕೇರಳದ ತಮ್ಮ ಹಿಂದಿನ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಇಂದು ಭೇಟಿ ನೀಡಲಿದ್ದಾರೆ.

ವಯನಾಡ್​ ಕ್ಷೇತ್ರಕ್ಕೆ ಆಗಮಿಸಿದ ನಂತರ ವಯನಾಡ್ ಜಿಲ್ಲೆಯ ಕೇಂದ್ರವಾದ ಕಲ್ಪೆಟ್ಟಾ ಪಟ್ಟಣದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇದೇ ಮಾರ್ಚ್​ 23 ರಿಂದ ರಾಹುಲ್​ ಗಾಂಧಿಯವರು ಲೋಕಸಭೆಯ ಸಂಸದರಾಗಿ ಅನರ್ಹ ಗೊಂಡಾಗಿನಿಂದ ಕೇಂದ್ರದ ಆಡಳಿತ ಭಾರತೀಯ ಜನತಾ ಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ತಮ್ಮ ಟೀಕಾ ದಾಳಿಯನ್ನು ನಡೆಸು ತ್ತಿದ್ದಾರೆ. ಇದಲ್ಲದೇ ಕಾಂಗ್ರೆಸ್ ನಾಯಕ ಈಗ ಕೈಗಾರಿಕೋದ್ಯಮಿ ಗೌತಮ್ ಅದಾನಿ ಮತ್ತು ಪ್ರಧಾನಿ ಮೋದಿಯೊಂದಿಗಿನ ಸಂಬಂಧಗಳ ವಿರುದ್ಧ ಪ್ರಶ್ನೆ ಮಾಡುತ್ತಿದ್ದಾರೆ.

ರಾಹುಲ್​ ಗಾಂಧಿಯವರು, 2019 ರ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಉಪನಾಮ ಮಾನನಷ್ಟ ಮಾಡಿದ್ದರಿಂದ, 2023ರ ಮಾರ್ಚ್​ರಂದು ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿತ್ತು. ಇದರಿಂದ ರಾಹುಲ್​ ಗಾಂಧಿಯವರು ಸಂಸತ್ತಿನಿಂದ ಅನರ್ಹಗೊಂಡರು. ಇದಾದ ಮೇಲೆ ಪಕ್ಷ ವಿಪಕ್ಷಗಳ ನಡುವೆ ಟೀಕಾ ಪ್ರಹಾರ ಹೆಚ್ಚುತ್ತಲೇ ಇದೆ. ಇದರ ಪರಿಣಾಮ ರಾಹುಲ್​ ಗಾಂಧಿ ಲೋಕಸಭೆಯಲ್ಲಿ ವಯನಾಡ್ ಕ್ಷೇತ್ರವನ್ನು ಪ್ರತಿನಿಧಿಸುವುದನ್ನು ನಿಲ್ಲಿಸಿದ್ದಾರೆ. ವಯನಾಡ್​ ಕ್ಷೇತ್ರ ಕೇರಳದ 20 ಲೋಕಸಭಾ ಕ್ಷೇತ್ರಗಳಲ್ಲಿ ಒಂದಾಗಿದೆ.

2019 ರ ಸಾರ್ವತ್ರಿಕ ಚುನಾವಣೆಯಲ್ಲಿ, ರಾಹುಲ್ ಗಾಂಧಿ ಅವರು ತಮ್ಮ ಎರಡನೇ ಸ್ಥಾನವಾಗಿ ವಯನಾಡ್‌ನಿಂದ ಸ್ಪರ್ಧಿಸಿ ದ್ದರು. ಮತ್ತು ಅವರು ತಮ್ಮ ಪ್ರತಿಸ್ಪರ್ಧಿ ಸಿಪಿಐ ಅಭ್ಯರ್ಥಿ ಪಿಪಿ ಸುನೀರ್‌ಗಿಂತ 4,31,779 ಕ್ಕೂ ಹೆಚ್ಚು ಮತಗಳ ದಾಖಲೆಯ ಅಂತರದಲ್ಲಿ ಗೆದ್ದಿದ್ದರು.