Thursday, 24th October 2024

ಸಚಿವ ಸತ್ಯೇಂದ್ರ ಜೈನ್’ರಿಗೆ ಜೂನ್ 9 ರವರೆಗೆ ಕಸ್ಟಡಿ

ನವದೆಹಲಿ: ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಅಕ್ರಮ ಹಣ ವರ್ಗಾ ವಣೆ ಪ್ರಕರಣದಲ್ಲಿ ಜೂನ್ 9 ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಲಾಗಿದೆ.

ಹಣಕಾಸು ಅಪರಾಧಗಳ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆ, ಅರವಿಂದ್ ಕೇಜ್ರಿವಾಲ್ ಸರ್ಕಾರದ ಸಚಿವರು 2015-16ರಲ್ಲಿ ಕೋಲ್ಕತ್ತಾ ಮೂಲದ ಸಂಸ್ಥೆಯೊಂದಿಗೆ ಹವಾಲಾ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದೆ.

ಕೇಂದ್ರೀಯ ತನಿಖಾ ದಳ, ಸತ್ಯೇಂದ್ರ ಜೈನ್ ಮತ್ತು ಅವರ ಕುಟುಂಬದ ವಿರುದ್ಧ ಆಗಸ್ಟ್ 2017 ರಲ್ಲಿ 1.62ರೂ. ಕೋಟಿ ವರೆಗಿನ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಪ್ರಕರಣ ದಾಖಲಿಸಿತ್ತು.

2011-12 ರಲ್ಲಿ 11.78 ಕೋಟಿ ರೂ. ಮತ್ತು 2015-16 ರಲ್ಲಿ 4.63 ಕೋಟಿ ರೂ. ವರ್ಗಾವಣೆ ಮಾಡಲು ಜೈನ್ ಮತ್ತು ಅವರ ಕುಟುಂಬವು ಯಾವುದೇ ನೈಜ ವ್ಯವಹಾರವಿಲ್ಲದ ನಾಲ್ಕು ಶೆಲ್ ಸಂಸ್ಥೆಗಳನ್ನುಸ್ಥಾಪಿಸಿದೆ ಎಂದು ಸಿಬಿಐ ಆರೋಪಿಸಿದೆ.

ಆಮ್ ಆದ್ಮಿ ಪಕ್ಷದ ನಾಯಕ ಮತ್ತು ಅವರ ಕುಟುಂಬದ ಒಡೆತನದ 4.81 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶ ನಾಲಯ ಮುಟ್ಟುಗೋಲು ಹಾಕಿಕೊಂಡ ಸುಮಾರು ಎರಡು ತಿಂಗಳ ನಂತರ ಈ ಬಂಧನವಾಗಿದೆ.