Sunday, 28th April 2024

500 ರೂ.ಗೆ ಜಗಳ, ಓರ್ವನ ಶಿರಚ್ಛೇದ, ಆರೋಪಿ ಶರಣು

Murder

ಗುವಾಹಟಿ: ಉತ್ತರ ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ 500 ರೂಪಾಯಿ ವಿಷಯದಲ್ಲಿ ಜಗಳ ಮಾಡಿಕೊಂಡು ತನ್ನದೇ ಗ್ರಾಮದ 55 ವರ್ಷದ ವ್ಯಕ್ತಿಯೊಬ್ಬನ ಶಿರಚ್ಛೇದ ಮಾಡಿದ್ದಾನೆ.

ಬಳಿಕ ಆರೋಪಿಯೇ ಕತ್ತರಿಸಿದ ತಲೆಯೊಂದಿಗೆ ಸುಮಾರು 25 ಕಿಲೋಮೀಟರ್ ದೂರದ ಪೊಲೀಸ್ ಠಾಣೆಗೆ ನಡೆದುಕೊಂಡು ಹೋಗಿ ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿ ಗಳು ತಿಳಿಸಿದ್ದಾರೆ.

ಉತ್ತರ ಅಸ್ಸಾಂನ ಸೋನಿತ್‌ಪುರ ಜಿಲ್ಲೆಯ ರಂಗಪಾರ ಪೊಲೀಸ್ ಠಾಣೆ ವ್ಯಾಪ್ತಿಯ ದೋಯಲ್‌ಪುರದಲ್ಲಿ ಸ್ವಾತಂತ್ರ್ಯ ದಿನಾ ಚರಣೆಯಂದು ಆಯೋಜಿಸಲಾಗಿದ್ದ ಫುಟ್‌ ಬಾಲ್ ಪಂದ್ಯ ಮುಗಿದ ನಂತರ ರಾತ್ರಿ ಸುಮಾರಿಗೆ ಈ ಘಟನೆ ನಡೆದಿದೆ. ಅರುಣಾಚಲ ಪ್ರದೇಶದ ಗಡಿಗೆ ಸಮೀಪದಲ್ಲಿರುವ ದೂರದ ಗ್ರಾಮ ದೋಯಲ್‌ಪುರ.

ಮೃತನನ್ನು ಬೋಯಿಲಾ ಹೆಮ್ರಾಮ್ ಎಂದು ಗುರುತಿಸಲಾಗಿದೆ. ಆರೋಪಿ ಸುನಿರಾಮ್ ಮಾದ್ರಿ (25) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 500 ರೂಪಾಯಿಗಳ ವಿವಾ ದದ ಪರಿಣಾಮವಾಗಿ ಬೋಯಿಲಾ ಹೇಮ್ರಾಮ್ ತನ್ನ ಪ್ರಾಣವನ್ನು ಕಳೆದುಕೊಂಡಿ ದ್ದಾರೆ.

“ಆರೋಪಿಯನ್ನು ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಮತ್ತು ಪ್ರಕರಣದ ಎಲ್ಲಾ ಅಂಶಗಳನ್ನು ತನಿಖೆ ಮಾಡಲಾ ಗುತ್ತಿದೆ” ಎಂದು ಅಧಿಕಾರಿ ತಿಳಿಸಿದ್ದಾರೆ. ಮೃತ ವ್ಯಕ್ತಿ ಮತ್ತು ಆರೋಪಿಗಳು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

error: Content is protected !!