Monday, 16th September 2024

ನಡ್ಡಾ ಬೆಂಗಾವಲು ವಾಹನಕ್ಕೆ ಕಲ್ಲು ತೂರಾಟ: ಡಿಜಿಪಿ, ಮುಖ್ಯ ಕಾರ್ಯದರ್ಶಿಗೆ ಸಮನ್ಸ್ ಜಾರಿ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಬೆಂಗಾವಲು ವಾಹನ ಸೇರಿದಂತೆ ಬಿಜೆಪಿ ನಾಯಕರ ಹಲವು ವಾಹನಗಳ ಮೇಲೆ ಕಲ್ಲು, ಇಟ್ಟಿಗೆಗಳಿಂದ ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ವ್ಯವಹಾರಗಳ ಸಚಿವಾ ಲಯ ಪಶ್ಚಿಮಬಂಗಾಳದ ಡಿಜಿಪಿ ಮತ್ತು ಮುಖ್ಯ ಕಾರ್ಯದರ್ಶಿಗೆ ಸಮನ್ಸ್ ಜಾರಿ ಮಾಡಿದೆ.

ಪಶ್ಚಿಮಬಂಗಾಳ ಸರ್ಕಾರ ಸೂಕ್ತ ಭದ್ರತೆ ನೀಡಲು ವಿಫಲವಾಗಿರುವುದಾಗಿ ಪಶ್ಚಿಮಬಂಗಾಳ ರಾಜ್ಯಪಾಲ ಜಗ್ ದೀಪ್ ಧಾನ್ಕರ್ ಅವರು ಕೇಂದ್ರ ಗೃಹ ಸಚಿವಾಲಯಕ್ಕೆ ವರದಿ ಕಳುಹಿಸಿದ್ದರು.

ಜೆಪಿ ನಡ್ಡಾ ಮತ್ತು ಬಿಜೆಪಿ ಮುಖಂಡರಿಗೆ ಸೂಕ್ತ ಭದ್ರತೆ ನೀಡಲು ಪಶ್ಚಿಮ ಬಂಗಾಳ ಸರ್ಕಾರ ವಿಫಲವಾದ ಹಿನ್ನೆಲೆಯಲ್ಲಿ ಗುರುವಾರದ ದಾಳಿ ಘಟನೆ ನಡೆಯಲು ಕಾರಣವಾಗಿರುವುದಾಗಿ ರಾಜ್ಯಪಾಲರ ವರದಿಯಲ್ಲಿ ತಿಳಿಸಿದೆ.

ಈ ಘಟನೆ ಮತ್ತು ಭದ್ರತಾ ವೈಫಲ್ಯದ ಬಗ್ಗೆ ಡಿ.14ರಂದು ಹಾಜರಾಗಿ ವಿವರಣೆ ನೀಡುವಂತೆ ಪಶ್ಚಿಮಬಂಗಾಳದ ಡಿಜಿಪಿ ಹಾಗೂ ಮುಖ್ಯಕಾರ್ಯದರ್ಶಿಗೆ ಸಮನ್ಸ್ ನೀಡಿದೆ.

Leave a Reply

Your email address will not be published. Required fields are marked *