Thursday, 19th September 2024

ಒಡಿಶಾ ಸರ್ಕಾರದಿಂದಲೂ ಇಂದು ರಾತ್ರಿ ಕರ್ಫ್ಯೂ ಜಾರಿ

ಭುವನೇಶ್ವರ: ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಜನರು ದೊಡ್ಡಮಟ್ಟದಲ್ಲಿ ಒಂದೇ ಕಡೆ ಸೇರುವುದನ್ನು ತಪ್ಪಿಸಲು ಒಡಿಶಾ ಸರ್ಕಾರ ಗುರುವಾರ ರಾತ್ರಿ 10 ಗಂಟೆಯಿಂದ ಕರ್ಫ್ಯೂ ವಿಧಿಸಿದೆ.

ರಾಜ್ಯಾದ್ಯಂತ ರಾತ್ರಿ 10 ಗಂಟೆಯಿಂದ ನಾಳೆ ಬೆಳಗ್ಗೆ 5 ಗಂಟೆಯವರೆಗೆ ಈ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ವಿಶೇಷ ಪರಿಹಾರ ಆಯುಕ್ತ(ಎಸ್‌ಆರ್‌ಸಿ)ರು ಹೇಳಿದ್ದಾರೆ. ಆದಾಗ್ಯೂ, ಕರ್ಫ್ಯೂ ಸಮಯದಲ್ಲಿ ಎಲ್ಲಾ ಅಗತ್ಯ ಸೇವೆಗಳಿಗೆ ಅನುಮತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾಳೆ ಬೆಳಗ್ಗೆ 5 ಗಂಟೆಯವರೆಗೆ ರಾಜ್ಯಾದ್ಯಂತ ಒಡಿಶಾ ಸರ್ಕಾರ ರಾತ್ರಿ ಕರ್ಫ್ಯೂ ವಿಧಿಸುತ್ತಿದೆ. ಸಾರ್ವಜನಿಕರು ಸಹಕರಿಸಬೇಕು. ಎಂದು ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *