Thursday, 19th September 2024

ಉತ್ತಮ ರಸ್ತೆಗಳು ಅಭಿವೃದ್ಧಿ ಹೊಂದಲು ಪೂರಕ: ಸಚಿವ ನಿತಿನ್ ಗಡ್ಕರಿ

ಲಾತೂರ್: ಉತ್ತಮ ರಸ್ತೆಗಳು ಅಭಿವೃದ್ಧಿ ಹೊಂದಲು ಪೂರಕ. ಕೇಂದ್ರ ಸರ್ಕಾರವು ಈ ಕಾರಣಕ್ಕಾಗಿ ರಸ್ತೆಗಳನ್ನು ಸುಧಾರಿಸುವತ್ತ ಗಮನ ಹರಿಸುತ್ತಿದೆ covidಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

₹40 ಸಾವಿರ ಕೋಟಿ ವೆಚ್ಚದಲ್ಲಿ ಗುಜರಾತ್‌ನ ಸೂರತ್ ಮತ್ತು ದಕ್ಷಿಣ ಭಾರತದೊಂದಿಗೆ ಸಂಪರ್ಕ ಕಲ್ಪಿಸುವ ಹೊಸ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲಾಗುವುದು. ಇದು ಮಹಾರಾಷ್ಟ್ರದ ನಾಶಿಕ್, ಅಹ್ಮದ್‌ ನಗರ ಮತ್ತು ಸೋಲಾಪುರ ಜಿಲ್ಲೆಗಳ ಮೂಲಕ ಹಾದುಹೋಗಲಿದೆ. ಈ ರಸ್ತೆಯ ಸಂಪರ್ಕ ವನ್ನು ಲಾತೂರ್ ಜಿಲ್ಲೆಯೂ ಸೇರಿದಂತೆ ಮರಾಠವಾಡ ಪ್ರದೇಶದ ಇತರ ಪ್ರದೇಶಗಳಿಗೂ ಕಲ್ಪಿಸಲು ಪ್ರಯತ್ನಿಸಲಾಗುವುದು ಸಚಿವರು ತಿಳಿಸಿದ್ದಾರೆ.

₹1,023 ಕೋಟಿ ವೆಚ್ಚದ 19 ರಸ್ತೆ ನಿರ್ಮಾಣ ಯೋಜನೆಗಳಿಗೆ ಲಾತೂರ್‌ನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಉದ್ಯಾನವನದಲ್ಲಿ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಅನೇಕ ಹೆದ್ದಾರಿಗಳು ನಿರ್ಮಾಣ ಹಂತದಲ್ಲಿವೆ. ಈ ಹೊಸ ರಸ್ತೆಗಳು ಯುವಕರ ಭವಿಷ್ಯ ರೂಪಿಸ ಲಿವೆ. ಅನೇಕ ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸಲಿದೆ ಎಂದು ಅವರು ಹೇಳಿದ್ದಾರೆ.

‘ಕಳೆದ ಕೆಲವು ವರ್ಷಗಳಲ್ಲಿ ಅನೇಕ ರಸ್ತೆಗಳನ್ನು ಸುಧಾರಿಸಲಾಗಿದೆ. ಹೊಸ ರಸ್ತೆಗಳನ್ನು ನಿರ್ಮಿಸಲಾಗಿದೆ. ಲಾತೂರ್‌ನಲ್ಲಿಯೂ ಹೆದ್ದಾರಿಗಳ ವಿಸ್ತರಣೆ ಮಾಡಲಾಗಿದೆ’ ಎಂದು ಗಡ್ಕರಿ ಹೇಳಿದ್ದಾರೆ.