Friday, 20th September 2024

ಮಾತುಕತೆಯಿಂದ ವಿವಾದ ಶಮನ, ಭಾರತೀಯರ ನಂಬಿಕೆಯಾಗಿದೆ: ಓಂ ಬಿರ್ಲಾ

OmBirla

ಗುವಾಹಟಿ: ಎಲ್ಲಾ ಅಂತರರಾಷ್ಟ್ರೀಯ ವಿವಾದಗಳನ್ನು ಮಾತುಕತೆಯ ಮೂಲಕವೇ ಪರಿಹರಿಸಿಕೊಳ್ಳಬೇಕು ಎಂಬುದರಲ್ಲಿ ಭಾರತೀಯರು ನಂಬಿಕೆ ಇಟ್ಟಿದ್ದಾರೆ ಎಂದು ಲೋಕಸಭೆ ಸ್ಪೀಕರ್ ಓಂ.ಬಿರ್ಲಾ ಶನಿವಾರ ಹೇಳಿದರು.

ಅಭಿವೃದ್ಧಿಗೆ ಪೂರಕವಾಗಿ ಶಾಂತಿ ಮತ್ತು ಸ್ಥಿರತೆ ಖಾತರಿಪಡಿಸಿಕೊಳ್ಳಲು ಉಳಿದಿರುವ ಸಮಸ್ಯೆಗಳನ್ನು ಪರಿಹರಿಸಲು ಭಾರತ ಇತರ ದೇಶಗಳೊಂದಿಗೆ ಮಾತುಕತೆ ನಡೆಸುತ್ತದೆ ಎಂದು ಹೇಳಿದರು.

ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಶನ್ (ಸಿಪಿಎ) ಅರ್ಧವಾರ್ಷಿಕ ಕಾರ್ಯ ಕಾರಿ ಸಮಿತಿ ಸಭೆಯ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನಮ್ಮ ಭಾರತೀಯ ಸಾಂಸ್ಕೃತಿಕ ನೀತಿಯು ಜಗತ್ತನ್ನು ಜಾಗತಿಕ ಕುಟುಂಬವಾಗಿ ನೋಡು ತ್ತದೆ. ಅಭಿವೃದ್ಧಿಗೆ ಶಾಂತಿ ಮತ್ತು ಸ್ಥಿರತೆಯ ಅಗತ್ಯವಿದೆ. ಆದ್ದರಿಂದ, ಬಾಕಿ ಉಳಿದಿರುವ ಸಮಸ್ಯೆ ಗಳನ್ನು ಪರಿಹರಿಸಲು ಭಾರತ ನಿಯಮಿತವಾಗಿ ಇತರ ದೇಶಗ ಳೊಂದಿಗೆ ಮಾತುಕತೆ ನಡೆಸುತ್ತದೆ’ ಎಂದು ಹೇಳಿದರು.

ಈ ಎರಡು ದಿನಗಳ ಸಭೆಯ ಚರ್ಚೆಗಳು ಸದಸ್ಯ ರಾಷ್ಟ್ರಗಳು ತಮ್ಮ ದೇಶಗಳಲ್ಲಿ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ ಎಂದು ಬಿರ್ಲಾ ಆಶಿಸಿದರು.

53 ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳು ಭೌತಿಕ ಅಥವಾ ವರ್ಚುವಲ್ ಮೂಲಕ ಕಾರ್ಯಕ್ರಮಕ್ಕೆ ಹಾಜರಾಗಿದ್ದಾರೆ.