Thursday, 19th September 2024

ಜನವರಿ 26ರ ದಂಗೆಯನ್ನು ಖಂಡಿಸಿದ ಪ್ರಧಾನಿ ಮೋದಿ

ನವದೆಹಲಿ : ವರ್ಷದ ಮೊದಲ ಮನ್ ಕೀ ಬಾತ್ ನಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜನವರಿ 26 ರ ಘಟನೆ ನೋವು ತಂದಿದೆ ಎಂದು ದೆಹಲಿಯಲ್ಲಿ ನಡೆದ ದಂಗೆಯನ್ನು ಖಂಡಿಸಿದ್ದಾರೆ.

ವರ್ಷದ ಮೊದಲ ಮನ್ ಕೀ ಬಾತ್ ನಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿ, ಮೋದಿ, ಈ ತಿಂಗಳಲ್ಲಿ ಹಲವು ಹಬ್ಬ ಆಚರಿಸಿದ್ದೇವೆ. ಹಲವರಿಗೆ ಪದ್ಮಶ್ರೀ ಪ್ರಶಸ್ತಿ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿ ನೀಡಿದ್ದೇವೆ. ಹಲವು ಕ್ಷೇತ್ರದ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಿದ್ದೇವೆ. ಆಸ್ಟ್ರೇಲಿಯಾ ನೆಲದಲ್ಲಿ ಟೀಂ ಇಂಡಿಯಾ ಒಗ್ಗಟ್ಟಿನ ಬಲದಿಂದ ಗೆಲುವು ಸಾಧಿಸಿದೆ ಎಂದು ಟೀಂ ಇಂಡಿಯಾ ಹೊಗಳಿದ ಪ್ರಧಾನಿ ಮೋದಿ.

ದೆಹಲಿ ದಂಗೆಗೆ ಪ್ರಧಾನಿ ಮೋದಿ ಆಘಾತ. ತ್ರಿವರ್ಣ ಧ್ವಜಕ್ಕೆ ಅವಮಾನಿಸಿದ್ದಕ್ಕೆ ಪ್ರಧಾನಿ ಮೋದಿ ಖಂಡಿಸಿದ್ದಾರೆ. ಕೊರೊನಾ ಲಸಿಕೆ ಹಂಚಿಕೆಯಲ್ಲಿ ನಾವು ಮುಂದಿದ್ದೇವೆ. ಕೊರೊನಾ ವಿರುದ್ಧದ ನಮ್ಮ ಹೋರಾಟ ಸಫಲವಾಗಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *