Thursday, 19th September 2024

ಪಂಜಾಬ್‌ ಮಾಜಿ ಮುಖ್ಯಮಂತ್ರಿಗೆ ಜನ್ಮದಿನದ ಶುಭ ಕೋರಿದ ಮೋದಿ

ನವದೆಹಲಿ: ಶಿರೋಮಣಿ ಅಕಾಲಿದಳದ ಮುಖಂಡ, ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ದೂರವಾಣಿ ಕರೆ ಮಾಡಿ 93ನೇ ಜನ್ಮದಿನದ ಶುಭಾಶಯ ಕೋರಿದರು.

ಕೃಷಿ ಕಾಯ್ದೆಗಳ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ವಿರುದ್ಧ ಕಟುವಾಗಿ ಟೀಕಿಸುತ್ತಿರುವ ಬಾದಲ್ ಅವರು ಸೋಮವಾರ ದೇಶವನ್ನು ಅಧೋಗತಿಗೆ ತಳ್ಳುವಂತಹ ಈ ಕಾಯ್ದೆಗಳನ್ನು ರದ್ದು ಮಾಡುವಂತೆ ಪ್ರಧಾನಿಯವರನ್ನು ಒತ್ತಾಯಿಸಿದ್ದರು.

ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ಸರ್ಕಾರ ತಮಗೆ ನೀಡಿದ್ದ ದೇಶದ ಅತ್ಯುನತ್ತ ನಾಗರಿಕ ಪ್ರಶಸ್ತಿ ಪದ್ಮ ವಿಭೂಷಣವನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದರು.