Monday, 16th September 2024

ಮೊದಲ ಸಚಿವ ಸಂಪುಟದಲ್ಲಿ 5 ಭರವಸೆಗಳನ್ನ ಈಡೇರಿಸುತ್ತೇವೆ: ರಾಗಾ

ವದೆಹಲಿ : ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ, ಕರ್ನಾಟಕದ ಜನತೆಗೆ, ಕಾರ್ಯಕರ್ತರಿಗೆ, ನಾಯಕರಿಗೆ ಅಭಿನಂದಿಸುತ್ತೇನೆ ಎಂದು ಹೇಳಿದರು.

 ‘ಬಡವರ ಶಕ್ತಿ ಇತ್ತು, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಬಡವರ ಜೊತೆಗಿದೆ. ಈ ದೇಶ ಪ್ರೀತಿಯನ್ನ ಇಷ್ಟಪಡುತ್ತದೆ ಎಂದು ಕರ್ನಾಟಕ ಹೇಳಿದೆ. ಕರ್ನಾಟಕದಲ್ಲಿ ದ್ವೇಷದ ಮಾರುಕಟ್ಟೆ ಮುಚ್ಚಿದೆ, ಪ್ರೀತಿಯ ಅಂಗಡಿಗಳು ತೆರೆದಿವೆ. ಮೊದಲ ಸಚಿವ ಸಂಪುಟದಲ್ಲಿ ಮೊದಲ ದಿನವೇ 5 ಭರವಸೆಗಳನ್ನ ಈಡೇರಿಸುತ್ತೇವೆ’ ಎಂದರು.

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕರ್ನಾಟಕದ ಜನತೆಗೆ 5 ಭರವಸೆಗಳನ್ನ ನೀಡಿದ್ದು, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಎಲ್ಲ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲಾಗು ವುದು ಎಂದು ಕಾಂಗ್ರೆಸ್ ಹೇಳಿತ್ತು. ಇನ್ನು ಹೊಸ ಶಿಕ್ಷಣ ನೀತಿಯನ್ನು ರದ್ದುಪಡಿಸಿ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರಲಾಗುವುದು.

63 ಗಡಿ ತಾಲೂಕುಗಳಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನ ಅಭಿವೃದ್ಧಿ ಪಡಿಸಲಾಗು ವುದು ಮತ್ತು ಎಲ್ಲಾ ಸಮುದಾಯಗಳ ಆಶಯ ಮತ್ತು ಆಕಾಂಕ್ಷೆಗಳಿಗೆ ಅನುಗುಣವಾಗಿ ಮೀಸಲಾತಿಯ ಮಿತಿಯನ್ನ 50% ರಿಂದ 75% ಕ್ಕೆ ಹೆಚ್ಚಿಸಲಾಗುವುದು ಎಂದು ಪಕ್ಷವು ಹೇಳಿತ್ತು.

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕುಟುಂಬದ ಪ್ರತಿಯೊಬ್ಬ ಮಹಿಳೆಗೆ ಪ್ರತಿ ತಿಂಗಳು 2,000 ರೂಪಾಯಿ ಭತ್ಯೆ ನೀಡುವುದಾಗಿ ಭರವಸೆ ನೀಡಿತ್ತು. ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ರೂ., ನಿರುದ್ಯೋಗಿ ಡಿಪ್ಲೋಮಾದಾರರಿಗೆ ಮಾಸಿಕ 1500 ರೂ.ಗಳನ್ನು ಎರಡು ವರ್ಷಗಳವರೆಗೆ ನೀಡಲಾಗುವುದು.

ರಾತ್ರಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿಗಳಿಗೆ ಪ್ರತಿ ತಿಂಗಳು 5000 ರೂ.ಗಳ ವಿಶೇಷ ಭತ್ಯೆ ನೀಡುವುದಾಗಿಯೂ ಘೋಷಿಸಲಾಗಿತ್ತು. ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಬಿಜೆಪಿ ಜಾರಿಗೆ ತಂದಿರುವ ಜನವಿರೋಧಿ ಕಾನೂನು ಹಾಗೂ ಎಲ್ಲ ಅನ್ಯಾಯದ ಕಾನೂನುಗಳನ್ನ ರದ್ದುಗೊಳಿಸುವುದಾಗಿಯೂ ಘೋಷಿಸಿದರು.