Friday, 20th September 2024

ಅತ್ಯಾಚಾರ ಆರೋಪ: ’ಮಹಾ’ ಸಚಿವರ ವಿರುದ್ದ ದಾಖಲಾಗಿದ್ದ ದೂರು ವಾಪಸ್

ಮುಂಬೈ: ಮಹಾರಾಷ್ಟ್ರದ ಸಚಿವ ಧನಂಜಯ್ ಮುಂಡೆ ವಿರುದ್ಧ ಅತ್ಯಾಚಾರ ಆರೋಪ ಮಾಡಿ ದೂರು ದಾಖಲಿಸಿದ್ದ ಗಾಯಕಿ ರೇಣು ಶರ್ಮಾ ತಮ್ಮ ದೂರನ್ನು ವಾಪಸ್ ತೆಗೆದುಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾನು ಸಚಿವ ಧನಂಜಯ್ ಮುಂಡೆ ವಿರುದ್ಧ ಸಲ್ಲಿಸಿದ್ದ ದೂರನ್ನು ಹಿಂಪಡಯುತ್ತಿರುವುದಾಗಿ ತಿಳಿಸಿದ್ದು, ಯಾವುದೇ ಕಾರಣ ಉಲ್ಲೇಖಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜನವರಿ 11ರಂದು ಸಚಿವ ಧನಂಜಯ್ ಮುಂಡೆ ವಿರುದ್ಧ ಗಾಯಕಿ ರೇಣು ಅತ್ಯಾಚಾರ ಆರೋಪ ಮಾಡಿದ್ದರು. ತನಗೆ ಬಾಲಿವುಡ್ ನಲ್ಲಿ ಅವಕಾಶ ನೀಡುವುದಾಗಿ ಭರವಸೆ ಕೊಟ್ಟು ಸಚಿವರು ಹಲವು ಬಾರಿ ಅತ್ಯಾಚಾರ ನಡೆಸಿರುವುದಾಗಿ ಆರೋಪಿಸಿದ್ದರು. ಆನಂತರ ಆರೋಪ ಅಲ್ಲಗಳೆದಿದ್ದ ಸಚಿವರು, ರೇಣು ಸಹೋದರಿ ಜೊತೆ ತಾವು ಸಂಬಂಧ ಹೊಂದಿದ್ದು, ಇವರಿಬ್ಬರೂ ಸೇರಿ ತಮ್ಮನ್ನು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದರು.