Sunday, 8th September 2024

ಸಚಿವ ಸೆಂಥಿಲ್ ಬಾಲಾಜಿ ಜಾಮೀನು ಅರ್ಜಿ ತಿರಸ್ಕೃತ: ಇಡಿ ವಶಕ್ಕೆ

ನ್ನೈ: ಸಚಿವ ಸೆಂಥಿಲ್ ಬಾಲಾಜಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಚೆನ್ನೈನ ಮೆಟ್ರೋಪಾಲಿಟನ್ ಸೆಷನ್ಸ್‌ ಕೋರ್ಟ್‌ ತಿರಸ್ಕರಿಸಿದ್ದು 8 ದಿನ ಜಾರಿ ನಿರ್ದೇಶನಾಲಯ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಇನ್ನು ಸೆಂಥಿಲ್ ಬಾಲಾಜಿ ನಿಭಾಯಿಸ್ತಿದ್ದ ಖಾತೆ ಮರು ಹಂಚಿಕೆಗೆ ತಮಿಳುನಾಡು ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ. ಸೆಂಥಿಲ್​ ಬಾಲಾಜಿ ಅವರು ನಿಭಾಯಿಸ್ತಿದ್ದ ಖಾತೆ ಮರು ಹಂಚಿಕೆಗೆ ಎಂ. ಕೆ. ಸ್ಟಾಲಿನ್ ಅವರು ರಾಜ್ಯಪಾಲರಿಗೆ ಪ್ರಸ್ತಾವನೆ ಸಲ್ಲಿಸಿದ್ದರು.

ಅಕ್ರಮ ಹಣ ವರ್ಗಾವಣೆ ಆರೋಪದಡಿ ವಿದ್ಯುತ್ ಮತ್ತು ಅಬಕಾರಿ ಸಚಿವ ವಿ ಸೆಂಥಿಲ್ ಬಾಲಾಜಿ ಮತ್ತು ಅವರ ಆಪ್ತರ ಮನೆ ಮೇಲೆ ಜಾರಿ ನಿರ್ದೇಶ ನಾಲಯ ಜೂ.13 ರಂದು ಅಧಿಕಾರಿಗಳು ದಾಳಿ ಮಾಡಿದ್ದರು.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ (ಜೂ.14) ಬೆಳಗ್ಗೆ ಸೆಂಥಿಲ್ ಅವರನ್ನು ಬಂಧಿಸಿ, ವೈದ್ಯಕೀಯ ತಪಾಸಣೆಗಾಗಿ ಓಮಂಡೂರರ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಿದ್ದರು.

error: Content is protected !!