Friday, 20th September 2024

ಇಡಿ ದುರ್ಬಳಕೆ ವಿಚಾರ: ಉಭಯ ಕಲಾಪ ಮುಂದೂಡಿಕೆ

ನವದೆಹಲಿ: ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳ ಪ್ರತಿಭಟನೆ ನಡುವೆಯೇ ಲೋಕಸಭೆಯ ಕಲಾಪವನ್ನು ಗುರುವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡ ಲಾಯಿತು.

ಸದನವು ಸಭೆ ಸೇರಿದ ತಕ್ಷಣವೇ ಕಾಂಗ್ರೆಸ್ ಸೇರಿದಂತೆ ಇತರೆ ಪ್ರತಿಪಕ್ಷ ಸದಸ್ಯರು ಇ.ಡಿ ಕ್ರಮ, ಬೆಲೆ ಏರಿಕೆ ಮತ್ತು ಇತರ ವಿಷಯ ಗಳನ್ನು ಪ್ರಸ್ತಾಪಿಸಲು ಬಯಸಿ ದರು.

ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ ಯಂಗ್ ಇಂಡಿಯಾ ಕಂಪನಿಯ ಕಚೇರಿಗೆ ಬುಧವಾರ ಇ.ಡಿ ತಾತ್ಕಾಲಿಕವಾಗಿ ಬೀಗ ಹಾಕಿದೆ. ಇದರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಕಾಂಗ್ರೆಸ್ ಸದಸ್ಯರು ಸದನದ ಬಾವಿಗೆ ನುಗ್ಗಿದರು. ಈ ವೇಳೆ ಸ್ಪೀಕರ್ ಓಂ ಬಿರ್ಲಾ ಅವರು, ಸದಸ್ಯರು ತಮ್ಮ ಸ್ಥಾನಗಳಿಗೆ ಹಿಂತಿರುಗುವಂತೆ ಮನವಿ ಮಾಡಿದರು. ಆದರೆ, ಅವರು ತಮ್ಮ ಪ್ರತಿಭಟನೆ ಮುಂದುವರೆಸಿದರು.

ಗದ್ದಲ ಮುಂದುವರಿದಾಗ ಬಿರ್ಲಾ ಅವರು ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ರಾಜ್ಯಸಭೆಯಲ್ಲೂ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿ ಕೊಳ್ಳುತ್ತಿದೆ ಎನ್ನುವ ವಿಚಾರವನ್ನು ಎತ್ತಿದರು. ಇದೇ ವಿಚಾರವಾಗಿ ಗದ್ದಲ ಮುಂದುವರಿಸಿದ್ದರಿಂದ ರಾಜ್ಯಸಭೆಯನ್ನೂ 12 ಗಂಟೆವರೆಗೆ ಮುಂದೂಡಲಾಗಿತ್ತು.