Thursday, 19th September 2024

ಸುರ್ಜೇವಾಲಾ, ಹರ್ ಸಿಮ್ರತ್ ಕೌರ್ ಬಾದಲ್’ಗೆ ಕರೋನಾ ಸೋಂಕು

ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ ರಂದೀಪ್ ಸಿಂಗ್ ಸುರ್ಜೇವಾಲಾ ಮತ್ತು ಶಿರೋಮಣಿ ಅಕಾಲಿ ದಳದ ಮುಖಂಡ ಹರ್ ಸಿಮ್ರತ್ ಕೌರ್ ಬಾದಲ್ ಅವರಿಗೆ ಕರೋನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ನನ್ನ ಕರೋನಾ ವೈರಸ್ ಸೋಂಕಿನ ತಪಾಸಣೆ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಐದು ದಿನಗಳಿಂದ ನನ್ನ ಜೊತೆಗೆ ಸಂಪರ್ಕ ಹೊಂದಿರುವವರು ಸ್ವಯಂಪ್ರೇರಿತರಾಗಿ ಸೋಂಕಿತ ತಪಾಸಣೆ ಮಾಡಿಸಿಕೊಳ್ಳಬೇಕು. ಅಗತ್ಯ ಮುನ್ನಚ್ಚರಿಕೆ ಕ್ರಮ ಗಳನ್ನು ತೆಗೆದುಕೊಳ್ಳಬೇಕು” ಎಂದು ಸುರ್ಜೇವಾಲಾ ಟ್ವೀಟ್ ಮಾಡಿದ್ದಾರೆ.

ಕೇಂದ್ರದ ಮಾಜಿ ಸಚಿವೆ ಹಾಗೂ ಶಿರೋಮಣಿ ಅಕಾಲಿ ದಳ ಮುಖಂಡರಾದ ಹರ್ ಸಿಮ್ರತ್ ಕೌರ್ ಬಾದಲ್ ಅವರಿಗೂ ಕೊವಿಡ್-19 ಸೋಂಕು ತಗುಲಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ.  ಇತ್ತೀಚಿನ ದಿನಗಳಲ್ಲಿ ನನ್ನ ಜೊತೆ ಸಂಪರ್ಕಕ್ಕೆ ಬಂದಿರುವವರು ಸ್ವಯಂಪ್ರೇರಿತರಾಗಿ ಐಸೋಲೇಟ್ ಆಗಬೇಕು. ಅಗತ್ಯ ಮುನ್ನಚ್ಚರಿಕೆ ಕ್ರಮಗಳ ಜೊತೆಗೆ ಕೊರೊನಾವೈರಸ್ ಸೋಂಕಿನ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.