Saturday, 27th July 2024

ಭಷ್ಟಾಚಾರ: 36,000 ಶಿಕ್ಷಕರ ನೇಮಕಾತಿ ರದ್ದು

ಕೋಲ್ಕತ್ತ: ಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಭಷ್ಟಾಚಾರ ನಡೆದಿದೆ ಎಂಬ ಕಾರಣಕ್ಕೆ ಕಲ್ಕತ್ತಾ ಹೈಕೋರ್ಟ್ 36,000 ಅಭ್ಯರ್ಥಿಗಳ ನೇಮಕಾತಿಯನ್ನು ರದ್ದುಗೊಳಿಸಿದೆ.

ಪಶ್ಚಿಮ ಬಂಗಾಳ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ ನೇಮಕಾತಿಗೆ ಕ್ರಮಗಳನ್ನು ಅನುಸರಿಸದ ಕಾರಣ ಕಲ್ಕತ್ತಾ ಹೈಕೋರ್ಟ್ ಈ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿ ಅಭಿಜಿತ್ ಗಂಗೋಪಾದ್ಯಾಯ್ ಪಶ್ಚಿಮ ಬಂಗಾಳದಲ್ಲಿ ಹಿಂದೆಂದೂ ಕಂಡು ಕೇಳರಿಯದಷ್ಟು ಭಷ್ಟಾಚಾರದ ಪ್ರಮಾಣ ಮಿತಿಯನ್ನು ಮೀರಿದೆ ಎಂದು ಅಭಿಪ್ರಾ ಯವನ್ನು ವ್ಯಕ್ತಡಿಸಿದ್ದಾರೆ.

” 2016ರಲ್ಲಿ ಮಂಡಳಿ 36,000ದಷ್ಟು ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಸಂದರ್ಭದಲ್ಲಿ ಅಗತ್ಯ ತರಬೇತಿ ಹೊಂದಿರಲಿಲ್ಲ. ಈ ಎಲ್ಲಾ ಶಿಕ್ಷಕರ ನೇಮಕಾತಿಯನ್ನು ರದ್ದುಗೊಳಿಸಲಾಗಿದೆ” ಎಂದು ನ್ಯಾಯಮೂರ್ತಿ ಗಂಗೋಪಾಧ್ಯಾಯ್ ನಿರ್ದೇಶನ ನೀಡಿದ್ದಾರೆ. ಈ ತೀರ್ಪು ಮಮತಾ ಬ್ಯಾನರ್ಜಿ ನೇತೃತ್ವದ ಆಡಳಿತ ಪಕ್ಷಕ್ಕೆ ಬಹುದೊಡ್ಡ ಮುಖಭಂಗ ಎಂದೇ ಪರಿಗಣಿಸಲಾಗುತ್ತಿದೆ.

17ಪುಟಗಳ ಈ ಆದೇಶದಲ್ಲಿ ನ್ಯಾಯಮೂರ್ತಿ ಗಂಗೋಪಾಧಯ್ ಅಭ್ಯರ್ಥಿಗಳು ಮತ್ತು ಸಂದರ್ಶಕರ ಸಾಕ್ಷ್ಯದಿಂದ ಯಾವುದೇ ಸಾಮರ್ಥ್ಯ ಪರೀಕ್ಷೆ ನಡೆದಿಲ್ಲ ಎಂಬ ಆರೋಪವು ಸಾಬೀತಾಗಿದೆ ಎಂದು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಣ ಮಂಡಳಿಯು ನಡೆಸಿದ 2016 ರ ನೇಮಕಾತಿ ಪ್ರಕ್ರಿಯೆಯಲ್ಲಿನ ಆಯ್ಕೆ ಪ್ರಕ್ರಿಯೆಯಲ್ಲಿನ ಸಂಪೂರ್ಣ ಅಕ್ರಮದಿಂದ ಕೂಡಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಂಡಳಿ ಮತ್ತು ಅದರ ಮಾಜಿ ಅಧ್ಯಕ್ಷ ಮಾಣಿಕ್ ಭಟ್ಟಾಚಾರ್ಯ ಸೇರಿದಂತೆ ಕೆಲ ಅಧಿಕಾರಿಗಳು ಈ ನೇಮಕಾತಿಯಲ್ಲಿ ಭಾರೀ ಅಕ್ರಮ ಹಣದ ವ್ಯವಹಾರ ನಡೆದಿರುವ ಆರೋಪದಲ್ಲಿ ಬಂಧಿತರಾಗಿದ್ದಾರೆ.

error: Content is protected !!