Saturday, 27th July 2024

ಪಶ್ಚಿಮ ಬಂಗಾಳದಲ್ಲಿ ಕೇರಳ ಸ್ಟೋರಿ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್‌

ವದೆಹಲಿ: ಕೇರಳ ಸ್ಟೋರಿ ಚಿತ್ರದ ಪ್ರದರ್ಶನಕ್ಕೆ ನಿಷೇಧ ಹೇರಿರುವ ಪಶ್ಚಿಮ ಬಂಗಾಳ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿ ಪಿ.ಎಸ್ ನರಸಿಂಹ ಮತ್ತು ಜೆಬಿ ಪಾರ್ದಿವಾಲಾ ಅವರಿದ್ದ ಪೀಠವು ಈ ಆದೇಶ ನೀಡಿದೆ.

ಚಿತ್ರಮಂದಿರಗಳಿಗೆ ಭದ್ರತೆ ಒದಗಿಸುವಂತೆ ತಮಿಳುನಾಡು ರಾಜ್ಯಕ್ಕೆ ಸೂಚಿಸಿದೆ. ವಿಚಾರಣೆ ನಡೆಸುವಾಗ ಪ್ರತಿ ಚಿತ್ರಮಂದಿರಕ್ಕೆ ಸಾಕಷ್ಟು ಭದ್ರತೆ ಒದಗಿಸಬೇಕು. ಅಲ್ಲದೆ ಚಲನಚಿತ್ರ ನೋಡುವವರ ಸುರಕ್ಷತೆ ಖಚಿತಪಡಿಸಿಕೊಳ್ಳಲು ಅಗತ್ಯ ವಾದ ವ್ಯವಸ್ಥೆಯನ್ನು ಮಾಡ ಬೇಕೆಂದು ನ್ಯಾಯಾಲಯ ನಿರ್ದೇಶಿಸಿದೆ.

ಚಲನಚಿತ್ರವು ಘಟನೆಗಳ ಕಾಲ್ಪನಿಕ ಆವೃತ್ತಿಯಾಗಿದೆ. 32 ಸಾವಿರ ಮಹಿಳೆಯರ ಮತಾಂತರದ ಅಂಕಿಅಂಶವನ್ನು ಖಚಿತ ಪಡಿಸಲು ಯಾವುದೇ ಅಧಿಕೃತ ದತ್ತಾಂಶಗಳಿಲ್ಲ ಎಂದು ಚಿತ್ರದ ವಿರುದ್ಧ ವಾದಿಸಲಾಗಿದೆ. ಇದನ್ನು ಸ್ಪಷ್ಟವಾಗಿ ಹೇಳುವ ಅಥವಾ ನಿರಾಕರಣೆಯ ಸ್ಪಷ್ಟತೆಯನ್ನು ಖಚಿತಪಡಿಸಬೇಕು ಎಂದು ನಿರ್ಮಾಪಕರಿಗೆ ನಿರ್ದೇಶನ ನೀಡಿದೆ.

ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ ಪ್ರಮಾಣೀಕರಣಕ್ಕೆ ಸಂಬಂಧಿಸಿದ ಅರ್ಜಿಯನ್ನು ನ್ಯಾಯಾಲಯದ ಬೇಸಿಗೆ ರಜೆಯ ನಂತರ ವಿಚಾರಣೆ ನಡೆಸಲಿದೆ. ಅದಕ್ಕಾಗಿ ನ್ಯಾಯಾಲಯವು ಮೊದಲು ಚಲನಚಿತ್ರವನ್ನು ನೋಡಬೇಕಾಗುತ್ತದೆ ಎಂದು ಆದೇಶದಲ್ಲಿ ಹೇಳಿದೆ.

ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಮೇ 8 ರಂದು ಪಶ್ಚಿಮ ಬಂಗಾಳ ರಾಜ್ಯದ ಶಾಂತಿ ಕಾಪಾಡುವ ಕಾರಣ ನೀಡಿ ಚಿತ್ರ ಪ್ರದರ್ಶನಕ್ಕೆ ನಿಷೇಧ ಹೇರಿತ್ತು.

error: Content is protected !!